
ವಿಶ್ವಚಾಂಪಿಯನ್ ಆಸ್ಟ್ರೇಲಿಯಾವನ್ನು 4 ವಿಕೆಟ್ಗಳಿಂದ ಸೋಲಿಸಿದ ಭಾರತ ಚಾಂಪಿಯನ್ಸ್ ಟ್ರೋಫಿ ಫೈನಲ್ ಪ್ರವೇಶಿಸಿದೆ. ಈ ಮೂಲಕ 2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಸೋಲಿಗೆ ಸೇಡು ತೀರಿಸಿಕೊಂಡಿದೆ.
ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 264 ರನ್ಗಳಿಗೆ ಆಲೌಟ್ ಆಗಿತ್ತು. ಭಾರತದ ಬೌಲರ್ ಗಳು ಸಂಘಟಿತ ದಾಳಿನ ನಡೆಸಿದರು. ಮೊಹಮದ್ ಶಮಿ 3 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ ವರುಣ್ ಚಕ್ರವರ್ತಿ, ರವೀಂದ್ರ ಜಡೇಜಾ ತಲಾ 2 ವಿಕೆಟ್ ಗಳಿಸಿದರು, ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 1 ವಿಕೆಟ್ ಗಳಿಸಿದರು.
ಈ ಮೊತ್ತವನ್ನು ಬೆನ್ನಟ್ಟಿದ ಭಾರತ 48.1 ಓವರ್ಗಳಲ್ಲಿ 267 ರನ್ ಗಳಿಸುವ ಮೂಲಕ ಫೈನಲ್ ಪ್ರವೇಶಿಸಿತು. ತಾಳ್ಮೆಯ ಆಟವಾಡಿ ಭಾರತ ಫೈನಲ್ ಪ್ರವೇಶಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ್ದ ವಿರಾಟ್ ಕೊಹ್ಲಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.
ವಿರಾಟ್ ಕೊಹ್ಲಿ 84 ರನ್ (98 ಎಸೆತ, 5 ಬೌಂಡರಿ), ಶ್ರೇಯಸ್ ಅಯ್ಯರ್ 45 ರನ್(62 ಎಸೆತ, 3 ಬೌಂಡರಿ), ಕೆಎಲ್ ರಾಹುಲ್ ಔಟಾಗದೇ 42 ರನ್ (34 ಎಸೆತ, 2 ಬೌಂಡರಿ, 2 ಸಿಕ್ಸ್), ಹಾರ್ದಿಕ್ ಪಾಂಡ್ಯ 28 ರನ್ (24 ಎಸೆತ, 1 ಬೌಂಡರಿ, 3 ಸಿಕ್ಸ್) ಹೊಡೆಯುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು.
ಎರಡನೇ ಸೆಮಿಫೈನಲ್ ಪಂದ್ಯ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ಮಧ್ಯೆ ನಡೆಯಲಿದೆ. ಈ ಪಂದ್ಯದಲ್ಲಿ ವಿಜೇತರಾದವರು ಭಾನುವಾರ ದುಬೈ ಮೈದಾನದಲ್ಲಿ ಭಾರತವನ್ನು ಎದುರಿಸಲಿದ್ದಾರೆ.