November 1, 2025

 

 

ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯ ನಿವಾಸಿ ಗಿರೀಶ್ (28) ಕೊಲೆಯಾದ ಯುವಕ. ಸುರಪುರ ಗ್ರಾಮದ ಶ್ರೀನಿವಾಸ್ ಅಲಿಯಾಸ್ ಸೀನ ಎಂತಾತ ಕೊಲೆಗೈದ ಆರೋಪಿ. ಕೊಲೆಯಾದ ಗಿರೀಶ್ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಆರೋಪಿ ಸೀನ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಭಾನುವಾರ ರಾತ್ರಿ ಯುವತಿ ವಿಚಾರಕ್ಕೆ ಗಿರೀಶ್ ಹಾಗೂ ಸೀನನ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಇದರಿಂದ ಗಿರೀಶ್ ಮೇಲೆ ಸೀನ ಕೋಪಗೊಂಡಿದ್ದ. ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್ ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿನಲ್ಲಿ ಸಾರಿಗೆ ಬಸ್ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಹೋಗಿ ಹೊರಗೆ ಬಂದಿದ್ದ.

ಈ ವೇಳೆ ಕಾದು ನಿಂತಿದ್ದ ಸೀನ ಮಚ್ಚು ಹಿಡಿದು ಗಿರೀಶ್ ಮೇಲೆ ಮನಬಂದಂತೆ ಕೊಚ್ಚಿ ಪರಾರಿ ಆಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಿರೀಶ್‌ನನ್ನು ಅಂಬ್ಯುಲೆನ್ಸ್‌ನಲ್ಲಿ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.

ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಮಹಜರು ನಡೆಸಿ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ