ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ಸೂಕ್ಷ್ಮ ಪ್ರದೇಶ ಹಾಗೂ ಗಡಿ ಪ್ರದೇಶ ಕೊಟ್ಟಿಗೆಹಾರ ಚೆಕ್ ಪೋಸ್ಟ್ ಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಭೇಟಿ ನೀಡಿದರು.
ಮೂಡಿಗೆರೆ ತಾಲ್ಲೂಕಿನ ಗಡಿ ಭಾಗಗಳಾದ ಬಾಳೂರು, ಕೊಟ್ಟಿಗೆಹಾರ, ಜನ್ನಾಪುರ, ಕಸ್ಕೇಬೈಲ್, ಕಿರುಗುಂದ, ಕೊಲ್ಲಿಬೈಲ್, ಗಡಿ ಪ್ರದೇಶಗಳನ್ನು ಗುರುತಿಸಿ ಅಧಿಕಾರಿಗಳ ಜತೆ ಚರ್ಚಿಸಿದರು.
ಗಡಿ ಭಾಗದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಪೊಲೀಸ್ ನಾಕಾ ಬಂದಿ, ತಪಾಸಣೆ ಮತ್ತಿತರ ಸೂಕ್ತ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚಿಸಿದರು. ಸೂಕ್ಷ್ಮ ಪ್ರದೇಶದಲ್ಲಿ ಸೂಕ್ತ ಭದ್ರತೆಯ ಬಗ್ಗೆಯೂ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ, ಎಸಿ ದಲ್ಜಿತ್ ಸಿಂಗ್, ತಹಸೀಲ್ದಾರ್ ಶೈಲೇಶ್ ಎಂ.ಪರಮಾನಂದ, ಬಣಕಲ್ ಸಬ್ ಇನ್ ಸ್ಪೆಕ್ಟರ್ ಕೌಶಿಕ್ ಮತ್ತಿತರ ಅಧಿಕಾರಿಗಳು ಇದ್ದರು.



