ಸೂಕ್ತ ದಾಖಲೆಗಳು ಇಲ್ಲದೆ ಸಾಗಿಸುತ್ತಿದ್ದ 4.21 ಕೋಟಿ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ನಲ್ಲಿ ಇಂದು ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನ ಬಿವಿಸಿ ಸಾರಿಗೆ ಸಂಸ್ಥೆಯ ಮಹೇಂದ್ರ ವಾಹನವನ್ನು ಎಂ.ಸಿ .ಹಳ್ಳಿ ಚೆಕ್ ಪೋಸ್ಟ್ ಬಳಿ ತಡೆದು ಶೋಧಿಸಿದಾಗ ಭಾರಿ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿವೆ.
ನಾಲ್ಕು ಕೋಟಿ ರೂ ಬೆಳೆಯ 6 ಕೆ.ಜಿ 586 ಗ್ರಾಂ ತೂಕದ ಚಿನ್ನದ ಆಭರಣ, 2,47 ಲಕ್ಷ ರೂ ಬೆಲೆ ಬಾಳುವ ಒಂದು ಕೆ.ಜಿ 873 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ದೊರಕಿವೆ.
17.47 ಲಕ್ಷ ರೂಪಾಯಿ ಬೆಲೆಯ ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ಗೋಪಾಲ್ ಎಂಬಾತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.




