IMG_20240727_165834_copy_467x331

 

 

ಅತಿವೃಷ್ಟಿಯಿಂದ ವಾಸದ ಮನೆಗಳು ಹಾನಿಗೊಳಗಾಗಿ ನಿರಾಶ್ರಿತರಾಗಿರುವ ಕುಟುಂಬಗಳಿಗೆ ಮೂಡಿಗೆರೆ ತಾಲೂಕಿನಲ್ಲಿ ಎರಡು ತಾತ್ಕಾಲಿಕ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಹಸೀಲ್ದಾರ್ ರಾಜಶೇಖರ ಮೂರ್ತಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪುರುಷರಿಗಾಗಿ ಮೂಡಿಗೆರೆ ನಗರದ ಕೆಎಂ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸಾರ್ವಜನಿಕ ಬಾಲಕರ ಪ್ರಿ ಮೆಟ್ರಿಕ್ ವಿದ್ಯಾರ್ಥಿ ನಿಲಯದಲ್ಲಿ ಮತ್ತು ಮಹಿಳೆಯರಿಗೆ ಮೂಡಿಗೆರೆಯ ಸಮಾಜ ಕಲ್ಯಾಣ ಇಲಾಖೆಯ ಕಾಲೇಜು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ತಾತ್ಕಾಲಿಕ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಸದರಿ ಕಾಳಜಿ ಕೇಂದ್ರಗಳಲ್ಲಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗಿರುತ್ತದೆ.

ಅತಿವೃಷ್ಟಿಯಲ್ಲಿ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವವರು ಈ ಕಾಳಜಿ ಕೇಂದ್ರದ ಸದುಪಯೋಗ ಪಡೆಯಲು ಕೋರಿದ್ದಾರೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ