ವಿಶ್ವಹಿಂದೂ ಪರಿಷದ್ ಮೂಡಿಗೆರೆ ಪ್ರಖಂಡ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಷಷ್ಠಿಪೂರ್ತಿ ಸಮಾರೋಪ ಸಮಾರಂಭದ ಅಂಗವಾಗಿ ಸೆಪ್ಟಂಬರ್ 5 ರಂದು ಮೂಡಿಗೆರೆ ವೇಣುಗೋಪಾಲ ದೇವಸ್ಥಾನದಲ್ಲಿ ಕೃಷ್ಣ ವೇಷ ಸ್ಪರ್ಧೆ ಏರ್ಪಡಿಸಲಾಗಿದೆ.
ಸೆಪ್ಟಂಬರ್ 5ರಂದು ಗುರುವಾರ ಸಂಜೆ 6 ಗಂಟೆಯಿಂದ ಸ್ಪರ್ಧೆ ಪ್ರಾರಂಭವಾಗಲಿದೆ. 6 ತಿಂಗಳಿಂದ 9 ವರ್ಷ ವಯಸ್ಸಿನ ಮಕ್ಕಳು ಭಾಗವಹಿಸಲು ಅವಕಾಶವಿದೆ.
6 ತಿಂಗಳಿಂದ 2 ವರ್ಷದ ಮಕ್ಕಳಿಗೆ ಮುದ್ದುಕೃಷ್ಣ, 3 ವರ್ಷದಿಂದ 5 ವರ್ಷದ ಮಕ್ಕಳಿಗೆ ಬಾಲಕೃಷ್ಣ ಮತ್ತು 5 ವರ್ಷದಿಂದ 9 ವರ್ಷದ ಮಕ್ಕಳಿಗೆ ಕಿಶೋರ ಕೃಷ್ಣ ಸ್ಪರ್ಧೆ ಏರ್ಪಡಿಸಲಾಗಿದೆ.
ವಿಜೇತ ಮಕ್ಕಳಿಗೆ ಆಕರ್ಷಕ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ ನೀಡಲಾವುದು.
ಮೊದಲು ನೊಂದಾಯಿಸಿದ 60 ಮಕ್ಕಳಿಗೆ ಮಾತ್ರ ಅವಕಾಶ, ಹೆಸರು ನೊಂದಾಯಿಸಲು 8073481369, 7975519530, 9481046983 ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಸಂಘಟಕರು ತಿಳಿಸಿದ್ದಾರೆ.




