ದೇಶದ ಪ್ರತಿಷ್ಠಿತ ಬಹುರಾಷ್ಟ್ರೀಯ ಸಾಫ್ಟ್ವೇರ್ ಕಂಪನಿ TCS ವತಿಯಿಂದ ಪ್ರೌಢಶಾಲೆಗಳ ಮಕ್ಕಳಿಗೆ ನಡೆದ (ಐಟಿ ಕ್ವಿಜ್) ಮಾಹಿತಿ ತಂತ್ರಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ನಡೆಸಿದೆ.
ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಿದ್ದು, ಈ ಸ್ಪರ್ಧೆಯಲ್ಲಿ ಆಲ್ದೂರಿನ ಪೂರ್ಣಪ್ರಜ್ಞ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಪರೀಕ್ಷಿತ್ ಮಹಾರಾಜ್. ಬಿ. ಎನ್. ಭಾಗವಹಿಸಿ ಅತಿಹೆಚ್ಚಿನ ಅಂಕಗಳನ್ನು ಪಡೆದಿದ್ದು, ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಪರೀಕ್ಷಿತ್ ಮಹಾರಾಜ್ ಮೂಡಿಗೆರೆ ಪಟ್ಟಣದ ವಕೀಲರಾದ ಬಿ.ಟಿ. ನಟರಾಜ್ ಮತ್ತು ಶಿಕ್ಷಕಿ ಶ್ರೀಮತಿ ಆಶಾ ಅವರ ಪುತ್ರ.
ಪರೀಕ್ಷಿತ್ ಮಹಾರಾಜ್ ಸಾಧನೆಗೆ ಪೂರ್ಣಪ್ರಜ್ಞ ಪ್ರೌಢಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.



