ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಪುರ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಮೃತಪಟ್ಟ ಪ್ರಕರಣದಲ್ಲಿ ಮೆಸ್ಕಾಂ ಮೂವರು ಎಂಜಿನಿಯರ್ಗಳ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ.
ಚಿಕ್ಕಮಗಳೂರು ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ವಿರುದ್ಧ ಆಲ್ದೂರು ವಲಯ ಅರಣ್ಯಾಧಿಕಾರಿ ಹರೀಶ್ ಪ್ರಕರಣ ದಾಖಲಿಸಿದ್ದಾರೆ.

ವಿದ್ಯುತ್ ತಂತಿಗಳು ನೆಲಕ್ಕೆ ಜೋರು ಬಿದ್ದಿದ್ದರಿಂದ ಆನೆ ಮೃತಪಟ್ಟಿದೆ. ಕಾಡುಪ್ರಾಣಿಗಳು ಓಡಾಡುವ ಜಾಗದಲ್ಲಿ ಜೋತು ಬಿದ್ದಿರುವ ವಿದ್ಯುತ್ ತಂತಿ ಸರಿಪಡಿಸಿಲ್ಲ ಎನ್ನಲಾಗಿದೆ. ಇದರಿಂದ ಅನೆಯ ಸಾವು ಸಂಭವಿಸಿದೆ ಎಂದು ಆರೋಪಿಸಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.



