ಮಾಜಿ ಪ್ರಧಾನಿ ಇಂದಿರಾ ಗಾಂಧಿಜಿಯವರ ಹುಟ್ಟುಹಬ್ಬವನ್ನು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಇತ್ತೀಚಿಗೆ ರಾಜ್ಯ ಪರಿಶಿಷ್ಟ ಜಾತಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ನೇತ್ರಾವತಿ ಹಾಗೂ ತಾಲೂಕು ಆಶ್ರಯ ಕಮಿಟಿ ನಾಮ ನಿರ್ದೇಶನ ಸದಸ್ಯೆಯಾಗಿ ಆಯ್ಕೆಯಾಗಿರುವ ಯಶೋಧ, ಪಕ್ಷದ ನಾಯಕರು ಆದ ಉಪ್ಪಳ್ಳಿ ಕೆ.ಭರತ್ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ಸದಸ್ಯರಾದ ಕುಸುಮ ಭರತ್ ರವರು ಇವರುಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷ ಡಾ. ಅಂಶುಮಂತ್ ಹಾಗೂ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ. ಜಿಲ್ಲಾ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಪ್ರವೀಣ್ ಬೆಟ್ಟಗೆರೆ, ನಗರಾಧ್ಯಕ್ಷ ತನುಜು ನಾಯ್ಡು, ನಗರ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಸಿಡಿಎ ನಾಮ ನಿರ್ದೇಶನ ಸದಸ್ಯರಾದಂತಹ ರಘು. ಸೃದೀಪ್ ನಗರಸಭೆ ನಾಮ ನಿರ್ದೇಶಕರಾದಂತಹ ಕೀರ್ತಿ ಸೇಟ್ ಹಾಗೂ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷರು ಕಾರ್ಯಕರ್ತರು ಹಾಗೂ ನಾನಾ ಘಟಕಗಳ ನಾಯಕರುಗಳು ಉಪಸ್ಥಿತರಿದ್ದರು



