ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್, ಮೂಡಿಗೆರೆ ಘಟಕದ ವತಿಯಿಂದ ಆಲ್ದೂರಿನ ಪೂರ್ಣಪ್ರಜ್ಞಾ ಶಾಲೆಯಲ್ಲಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಹದಿಹರೆಯದಲ್ಲಿ ದೈಹಿಕ ಮತ್ತು ಮಾನಸಿಕ ಬದಲಾವಣೆಗಳು ಮತ್ತು ಆರೋಗ್ಯ ರಕ್ಷಣೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಮಾನಸಿಕ ತಜ್ಞರಾದ ಹೆಚ್.ಎಸ್. ಪೂರ್ಣಿಮಾ ಮತ್ತು ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಹೆಚ್.ಎಸ್.ಜಲಜಾಕ್ಷಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಸೀನಿಯರ್ ಛೇಂಬರ್ ಅಧ್ಯಕ್ಷ ಬಿ ಬಸವರಾಜ್, ಕಾರ್ಯದರ್ಶಿ ಹೆಚ್.ಅರ್. ಪ್ರದೀಪ್, ಪೂರ್ಣಪ್ರಜ್ನಾ ಸ್ಕೂಲ್ ನ ಪ್ರಿನ್ಸಿಪಾಲ್ ವೆಂಕಟೇಶ್, ಸೀನಿಯರ್ ಛೇಂಬರ್ ಸದಸ್ಯರಾದ ಬಿ.ಎನ್. ಮನಮೋಹನ್, ವಿನೋದ್ ಕುಮಾರ್ ಶೆಟ್ಟಿ, ಕೆ.ಎಲ್.ಎಸ್. ತೇಜಸ್ವಿ, ವಿಜಯಕುಮಾರ್ ಮುಂತಾದವರು ಉಪಸ್ಥಿತರಿದ್ದರು. ಶಾಲೆಯ ಸುಮಾರು 350 ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆದರು.
ಕಾರ್ಯಕ್ರಮಕ್ಕೆ ಜಿಲ್ಲಾಸ್ಪತ್ರೆಯ ಸರ್ಜನ್ ಡಾ. ಮೋಹನ್ ಕುಮಾರ್ ಸಹಕಾರ ನೀಡಿದರು.




