ಮೂಡಿಗೆರೆಯಲ್ಲಿ ಡಿಸೆಂಬರ್ 06ರ ಸಂಜೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ 68ನೇ ಪರಿನಿಬ್ಬಾಣ ಕಾರ್ಯಕ್ರಮವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೌನ ದೀಪಗಳೊಂದಿಗೆ ಮೆರೆವಣಿಗೆ ಬರುವುದರ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಮೂಡಿಗೆರೆಯಲ್ಲಿ ನೂರಾರು ಸಂಖ್ಯೆಯ ಛಲವಾದಿ ಬಂಧುಗಳೊಂದಿಗೆ ಆಚರಿಸಲಾಯಿತು, ಐಬಿ ಯಿಂದ ಕ್ಯಾಂಡಲ್ ಗಳನ್ನು ಹಿಡಿದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮುಖಾಂತರ ಸಾಗಿ ಕೊನೆಗೆ ಲಯನ್ಸ್ ವೃತ್ತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ನೇತೃತ್ವವನ್ನು ತಾಲ್ಲೂಕು ಛಲವಾದಿ ಮಹಾಸಭಾ ವಹಿಸಿಕೊಂಡಿತ್ತು.
ಕಾರ್ಯಕ್ರಮದಲ್ಲಿ ಮಹಾಸಭಾ ಅಧ್ಯಕ್ಷ ಬೆಟ್ಟಗೆರೆ ಮಂಜುನಾಥ್, ಮಾಜಿ ಸಚಿವ ಬಿ.ಬಿ. ನಿಂಗಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ. ಎಸ್ ಅನಂತ್, ಮುಖಂಡರುಗಳಾದ ದೀಪಕ್ ದೊಡ್ಡಯ್ಯ, ಹೆಸಗಲ್ ಗಿರೀಶ್, ಎಂ ಎಸ್ ಕೃಷ್ಣ, ಗಿರೀಶ್ ಹಂಡುಗುಳಿ,ಮಹೇಂದ್ರ ಮೌರ್ಯ ಉಪಸ್ಥಿತರಿದ್ದರು.



