ಬಾಲಿವುಡ್ ಸ್ಟಾರ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರು ಬಾಳೆಹೊನ್ನೂರು ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆಯನ್ನು ಕೊಡುಗೆಯನ್ನು ಕೊಟ್ಟಿದ್ದಾರೆ. ರಂಭಾಪುರಿ ಶ್ರೀ ಡಾ: ವೀರ ಸೋಮೇಶ್ವರ ಸ್ವಾಮೀಜಿ ಅನಾವರಣ ಮಾಡಿದರು.

ಇದು ರೋಬೋಟಿಕ್ ಆನೆಯಾಗಿದ್ದು, ನೋಡುವುದಕ್ಕೆ ಯಥಾವತ್ತಾಗಿ ರಿಯಲ್ ಆನೆಯಂತೆಯೇ ಕಾಣಿಸುತ್ತದೆ. ಸದಾ ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನ ಅಲುಗಾಡಿಸುತ್ತಿರುತ್ತದೆ. ನೋಡಲು ದೈತ್ಯ ಗಾತ್ರದಾಗಿದ್ದು, ಈ ಆನೆಯನ್ನು ನೋಡಿದವರಿಗೆ ಜೀವಂತ ಆನೆಯೇ ಇಲ್ಲಿ ನಿಂತುಕೊಂಡಿದೆ ಎಂಬಂತೆ ತೋರುತ್ತಿದೆ.

ಶಿಲ್ಪಾ ಶೆಟ್ಟಿ ಒಂದು ಸಂಕಲ್ಪವನ್ನು ಮಾಡಿಕೊಂಡು ಮಠಕ್ಕೆ ರೋಬಾಟಿಕ್ ಆನೆಯನ್ನು ಕೊಡುಗೆಯಾಗಿ ನೀಡಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ.
ದೇಶದ ಪಂಚಪೀಠಗಳಲ್ಲೇ ಮೊದಲ ಪೀಠವಾದ ರಂಭಾಪುರಿ ಮಠವು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿ ಇದ್ದು, ಈ ಮಠದ ಭಕ್ತರಾಗಿರುವ ಬಾಲವುಡ್ ನಟಿ ಶಿಲ್ಪಾ ಶೆಟ್ಟಿ ದಂಪತಿ ಆಗಾಗ ಮಠಕ್ಕೆ ಬಂದು ಹೋಗುತ್ತಾರೆ. ಈ ಹಿನ್ನೆಲೆಯಲ್ಲಿ ಮಠಕ್ಕೆ ಆನೆ ಕೊಡುವ ಸಂಕಲ್ಪ ಮಾಡಿಕೊಂಡಿದ್ದರು ಎನ್ನಲಾಗಿದೆ.



