ತಮಿಳುನಾಡು ರಾಜ್ಯದಲ್ಲಿ ಡಿಎಂಕೆ ಅಧಿಕಾರದಿಂದ ಕೆಳಗಿಳಿಯುವವರೆಗೂ ಶೂ ಧರಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಪ್ರತಿಜ್ಞೆ ಮಾಡಿದ್ದಾರೆ.
ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ.
ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ.
ಅಣ್ಣಾ ಯೂನಿರ್ವಸಿಟಿಯಲ್ಲಿ ಓದುತ್ತಿದ್ದ ಇಂಜಿನಿಯರಿಂಗ್ ವಿಧ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್ನಲ್ಲಿ ಅತ್ಯಾಚಾರ ನಡೆದಿದೆ. ಇದರ ವಿರುದ್ಧ ವಿಧ್ಯಾರ್ಥಿನಿ ಪೊಲೀಸರಿಗೆ ದೂರನ್ನು ನೀಡಿದ್ದರು.
ಪೊಲೀಸರು ಜ್ಞಾನಶೇಖರನ್ ಎಂಬಾತನನ್ನು ಬಂಧಿಸಿದ್ದರು. ಈತ ಯುವತಿಯ ಖಾಸಗಿ ವಿಡೀಯೋ ಚಿತ್ರಿಕರಿಸಿಕೊಂಡು ಬ್ಲಾಕ್ಮೇಲ್ ಮಾಡಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದನು ಎಂಬ ಆರೋಪವಿದೆ. ಆರೋಪಿಯ ಮೇಲೆ 2011ರಲ್ಲಿಯೂ ಇದೇ ರೀತಿಯ ಪ್ರಕರಣ ದಾಖಲಾಗಿದ್ದು. ಈತನ ವಿರುದ್ದ ಸುಮಾರು 17 ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಆದರೂ ಈ ಆರೋಪಿ ಸ್ವತಂತ್ರ್ಯವಾಗಿ ಓಡಾಡುತ್ತಿದ್ದಾನೆ.

ಡಿಎಂಕೆ ಸರ್ಕಾರದ ಆಡಳಿತದಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲ ಎಂದು ಆರೋಪಿಸಿ ತಮಿಳುನಾಡು ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ 48 ದಿನಗಳ ಸುದೀರ್ಘ ಉಪವಾಸ ಕೈಗೊಂಡಿರುವ ಅಣ್ಣಾಮಲೈ , ಆರು ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ .
ಈ ಪ್ರಕರಣದಲ್ಲಿ ತಮಿಳುನಾಡು ಪೊಲೀಸರು ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಅಣ್ಣಾಮಲೈ ಆರೋಪಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರೆ, ಪೊಲೀಸರು ಅವರನ್ನು ಬಂಧಿಸುತ್ತಾರೆ. ಅದಕ್ಕಾಗಿಯೇ ಈಗ ಬಿಜೆಪಿ ಸದಸ್ಯರು ತಮ್ಮ ಮನೆಗಳ ಹೊರಗೆ ಪ್ರತಿಭಟನೆ ನಡೆಸುತ್ತಾರೆ ಎಂದು ಅವರು ಹೇಳಿದ್ದಾರೆ.


