ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಟಿ.ರಾಜಶೇಖರ್, ಉಪಾಧ್ಯಕ್ಷರಾಗಿ ಟಿ.ಡಿ.ಮಲ್ಲೇಶ್, ಗೌರವ ಕಾರ್ಯದರ್ಶಿಯಾಗಿ ಎಂ.ಎಸ್ ಪ್ರದೀಪ್ಕುಮಾರ್ ಆಯ್ಕೆಯಾಗಿದ್ದಾರೆ.
ಶುಕ್ರವಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಮೇಲ್ಕಂಡವರನ್ನು ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ವೆಂಕಟೇಶ್ ಘೋಷಿಸಿದರು. ನಂತರ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಅಧ್ಯಕ್ಷ ಟಿ.ರಾಜಶೇಖರ್ ಸಮಾಜದ ಹಿರಿಯರು ಸ್ಥಾಪಿಸಿದ ಒಕ್ಕಲಿಗರ ಸಂಘದ ಅಭಿವೃದ್ಧಿಗೆ ಇಂದು ಆಯ್ಕೆಯಾದ ನಿರ್ದೇಶಕರು, ಪದಾಧಿಕಾರಿಗಳು ಶ್ರಮಿಸಬೇಕೆಂದು ಕರೆ ನೀಡಿದರು.
ಕಳೆದ ಮೂರು ವರ್ಷದ ಅವಧಿಯಲ್ಲಿ ಸಾಧಿಸಿರುವ ಅಭಿವೃದ್ಧಿ ಕಾರ್ಯಗಳನ್ನು ಮೌಲ್ಯಮಾಪನ ಮಾಡಿ ನಿರ್ದೇಶಕರುಗಳು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ, ಜನಾಂಗದ ಮತ್ತು ಹಿರಿಯರ ಗೌರವಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುವುದಾಗಿ ಭರವಸೆ ನೀಡಿದರು.
ಮುಂದಿನ ಮೂರು ವರ್ಷಗಳ ಅವಧಿಗೆ ಮತ್ತೋಮ್ಮೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು ಈ ಅವಧಿಯಲ್ಲಿ ಸಮಾಜದ ಮತ್ತು ಸಂಘಟನೆಗೆ ಒತ್ತುನೀಡಿ ಕೆಲಸ ಮಾಡಲು ಬದ್ಧವಾಗಿದ್ದೇವೆ, ಆಯ್ಕೆ ಮಾಡಿರುವ ನಿರ್ದೇಶಕರು ಹಾಗೂ ಸದಸ್ಯರಿಗೆ ಧನ್ಯವಾದಗಳನ್ನು ಸಲ್ಲಿಸಿದರು.
ಉಪಾಧ್ಯಕ್ಷ ಟಿ.ಡಿ ಮಲ್ಲೇಶ್ ಮಾತನಾಡಿ ನೂತನ ಪದಾಧಿಕಾರಿಗಳ ಮೇಲೆ ವಿಶ್ವಾಸವಿಟ್ಟು ಸಹಕಾರದಿಂದ ಆಯ್ಕೆ ಮಾಡಿರುವ 25 ನಿರ್ದೇಶಕರುಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಗೌರವ ಕಾರ್ಯದರ್ಶಿ ಎಂ.ಎಸ್ ಪ್ರದೀಪ್ ಕುಮಾರ್ ಮಾತನಾಡಿ ಸಂಘದ ಈ ಸ್ಥಾನಕ್ಕೆ ಅಗೌರವ ತರದೆ ನಿಮ್ಮೆಲ್ಲರ ಸಲಹೆ ಸಹಕಾರ ಪಡೆದು ಸಮುದಾಯದ ಅಭಿವೃದ್ಧಿಗೆ ಅಧ್ಯಕ್ಷರೊಂದಿಗೆ ಸೇರಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಮಾಜಿ ಗೌರವ ಕಾರ್ಯದರ್ಶಿ ಎಂ.ಸಿ.ಪ್ರಕಾಶ್ ಮಾತನಾಡಿ ಒಕ್ಕಲಿಗರ ಸಂಘ ಹಿಂದಿನವರು ಹಾಕಿದ ಬುನಾದಿಯಾಗಿದ್ದು ಜಿಲ್ಲೆ, ರಾಜ್ಯದಲ್ಲಿಯೇ ಪ್ರತಿಷ್ಠಿತ ಸಂಘಟನೆಯಾಗಿದೆ, ಸಂಘದಲ್ಲಿ ಇದುವರೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಸಂಘದಲ್ಲಿದ್ದ ಸದಸ್ಯರು ಹೊರಗಡೆ ಸಂಘದ ಕುರಿತು ಅಪಪ್ರಚಾರ ಮಾಡಬೇಡಿ ಎಂದು ಮನವಿ ಮಾಡಿದರು.
ಜಿಲ್ಲಾ ಒಕ್ಕಲಿಗರ ಸಂಘ ಇತರೆ ಸಮಾಜದ ಸಂಘಟನೆಗಳಿಗೆ ಮಾದರಿಯಾಗಬೇಕು, ಸಂಘದಲ್ಲಿ ಪಾರದರ್ಶಕತೆ ಇರುತ್ತದೆ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಸರ್ವ ಸದಸ್ಯರ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಇದರಲ್ಲಿ ಸಂಶಯ ಅನಗತ್ಯ ಎಂದರು.

ಸೇವಾ ಮನೋಭಾವವನ್ನು ಹೊಂದಿರುವ ಉದ್ದೇಶದಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು ರಾಜಕೀಯ ಮಾಡಲು ಬಂದಿಲ್ಲ, ಸ್ವಾರ್ಥಕ್ಕೆ ಅವಕಾಶವಿಲ್ಲ, ಒಕ್ಕಲಿಗ ಸಮಾಜದಲ್ಲಿ ಪ್ರಜ್ಞಾವಂತ ಮತದಾರರಿದ್ದು ಸೇವಾ ಮನೋಭಾವ ಹೊಂದಿರುವವರನ್ನು ಆಯ್ಕೆ ಮಾಡುತ್ತಾರೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಪಿ.ರಾಜು, ಎಂ.ಅಶೋಕ್, ಎಂ.ಬಿ.ಸತೀಶ್, ಬಿ.ಸಿ.ಲೋಕಪ್ಪಗೌಡ, ಐ.ಸಿ.ಶ್ರೀನಾಥ್, ಮನುಕುಮಾರ್.ಯು.ಪಿ, ಕೆ.ಪಿ.ರಾಜೇಂದ್ರ, ಹೆಚ್.ಎಸ್.ಮೋಹನ್, ವಿ.ಕೆ.ಹರಿಣಾಕ್ಷಿ ನಾಗರಾಜ್, ಕೆ.ಬಿ.ಅನಂತೇಗೌಡ, ಕೆ.ಬಿ.ಸಜಿತ್, ಜೆ.ಪಿ.ಹೊಯ್ಸಳಗೌಡ, ಐ.ವಿ.ಮಂಜುಚೇತನ್, ಕೆ.ಯು ರತೀಶ್ಕುಮಾರ್, ಭವ್ಯನಟೇಶ್, ಪವಿತ್ರ, ಸಂತೋಷ್.ಎಂ.ಬಿ, ಕೆ.ಪಿ.ಪೃಥ್ವಿರಾಜ್, ಹೆಚ್.ಕೆ.ನವೀನ್, ಸಿ.ಟಿ.ರೇವತಿ, ಪ್ರಮೋದ್, ಟಿ.ಎಂ.ಉಮಾಶಂಕರ್, ಮಾಜಿ ಅಧ್ಯಕ್ಷರುಗಳಾದ ಸಂದೀಪ್, ಹಲಸೆ ಶಿವಣ್ಣ, ರಾಜೇಗೌಡ.ಕೆ, ಮಾಜಿ ಕಾರ್ಯದರ್ಶಿ ಉಮೇಶ್ಚಂದ್ರ, ಲಕ್ಷ್ಮಣ್ಗೌಡ ಉಪಸ್ಥಿತರಿದ್ದರು.



