ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಜೆಸಿಐ ಹೊಯ್ಸಳ ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳಿಗೆ ಸಮಯ ಪಾಲನೆ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ವಿಚಾರವಾಗಿ ತರಬೇತಿ ಆಯೋಜಿಸಲಾಗಿತ್ತು.
ಜೇಸಿಐ ವಲಯ ತರಬೇತಿದಾರರಾದ ಮೂಡಿಗೆರೆ ಜೇಸಿಐ ಪೂರ್ವಾಧ್ಯಕ್ಷ ಟಿ. ಹರೀಶ್ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ವಿದ್ಯಾರ್ಥಿಗಳು ಸಮಯ ಪರಿಪಾಲನೆ ಮತ್ತು ಸಂದರ್ಭಕ್ಕ ತಕ್ಕ ನಿರ್ಧಾರ ಕೈಗೊಳ್ಳುವ ಕಲೆಯನ್ನು ಅಳವಡಿಸಿಕೊಳ್ಳಬೇಕು ಎಂದರು.
ಗೋಣಿಬೀಡು ಜೇಸಿಐ ಅಧ್ಯಕ್ಷ ಜಗತ್ ವಿದ್ಯಾರ್ಥಿಗಳಿಗೆ ವಿವೇಕಾನಂದ ಅವರ ಆದರ್ಶ ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಹೇಳಿದರು.
ಈ ಸಂದರ್ಭದಲ್ಲಿ , ಪೂರ್ವ ಅಧ್ಯಕ್ಷ ಚಂದ್ರಶೇಖರ, ಮುಖ್ಯ ಶಿಕ್ಷಕ ರಾಮು, ಶಿಕ್ಷಕರಾದ ಲೋಕೇಶ್, ಉದಯ ಕುಮಾರ್ ಹಾಜರಿದ್ದರು



