ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಪ್ರಸಾದ್ ನೇತ್ರಾಲಯ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂದತ್ವ ನಿವಾರಣ ವಿಭಾಗ ಚಿಕ್ಕಮಗಳೂರು ಮತ್ತು ಜೆಸಿಐ ಬಣಕಲ್ ವಿಸ್ಮಯ ವಿಸ್ಮಯ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮತ್ತು ಮಸೂರ ಅಳವಡಿಕೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
*ಜೆ ಸಿ ಐ ಬಣಕಲ್* ವಿಸ್ಮಯ ಸಂಸ್ಥೆಯ ಜೇಸಿ ಭವನದಲ್ಲಿ ನಡೆದ ಶಿಬಿರದಲ್ಲಿ ಉಡುಪಿಯ ಪ್ರಸಾದ್ ನೇತ್ರಾಲಯದ ನುಡಿತ ತಜ್ಞರು ಶಿಬಿರವನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಬಣಕಲ್ ಜೇಸಿಐ ಅಧ್ಯಕ್ಷರಾದ ಸುರೇಂದ್ರ ಕೋಳೂರು ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ನೇತ್ರ ತಜ್ಞರು ಮತ್ತು ಸಿಬ್ಬಂದಿಗಳು ಹಾಗೂ ಸಹಕಾರ ನೀಡಿದ ವಿವಿಧ ಸಂಘ-ಸಂಸ್ಥೆಗಳು ಸಾರ್ವಜನಿಕರು ಜೇಸಿ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಬಣಕಲ್ ಸುತ್ತಮುತ್ತಲಿನ ನೂರಾರು ಸಾರ್ವಜನಿಕರು ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಂಡರು




