puttali

 

 

ಕರ್ನಾಟಕದ ಅದಿದೇವತೆ ತಾಯಿ ಭುವನೇಶ್ವರಿ ಪ್ರತಿಯೊಬ್ಬ ಕನ್ನಡಿಗನ ಸ್ವಾಭಿಮಾನದ ಪ್ರತೀಕ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ತಿಳಿಸಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿರುವ ತಾಯಿ ಭುವನೇಶ್ವರಿಯ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು ಭಾರತೀಯರಿಗೆ ಮೂರ್ತಿಪ್ರತಿಷ್ಟಾಪನೆ , ಆರಾಧನೆ ಎಂಬುದಕ್ಕೆ ಭಾವನಾತ್ಮಕ ಸಂಬಂಧವಿದೆ ಆ ಹಿನ್ನೆಲೆಯಲ್ಲಿ ನಗರದ ಕನ್ನಡ ಭವನದಲ್ಲಿ ತಾಯಿ ಭುವನೇಶ್ವರಿಯ ಪುತ್ತಳಿ ಅನಾವರಣ ಮಾಡಿರುವುದು ಹೆಮ್ಮೆ ತಂದೆ ಎಂದು ಹೇಳಿದರು.

ಕನ್ನಡದ ಮೊದಲ ಕದಂಬ ದೊರೆ ಮಯೂರವರ್ಮನ ಕಾಲದಿಂದಲೂ ತಾಯಿ ಭುವನೇಶ್ವರಿಯನ್ನು ಆರಾಧನೆಯನ್ನು ಮಾಡಲಾಗುತ್ತಿದೆ. ಅದರೊಂದಿಗೆ ವಿಜಯನಗರ ಸ್ಥಾಪನೆ ಮಾಡಲು ಸಂಕಲ್ಪಿಸಿದ ವಿದ್ಯಾರಣ್ಯರು ತಾಯಿ ಭುವನೇಶ್ವರಿಯ ಪೂಜೆಯೊಂದಿಗೆ ತಮ್ಮ ಕಾರ್ಯವನ್ನು ಆರಂಭಿಸಿದ್ದರು ಎಂದು ನೆನಪಿಸಿದರು.

ಮೈಸೂರಿನ ಮುಮ್ಮಡಿ ಕೃಷ್ಣರಾಜ ಒಡೆಯರ್ ಮೇಲುಕೋಟೆಯಲ್ಲಿ ಭುವನೇಶ್ವರಿ ಮಂಟಪ ನಿರ್ಮಿಸಿದರೇ ಕೊನೆಯ ದೊರೆ ಜಯಚಾಮರಾಜೇಂದ್ರ ಒಡೆಯರ್ ತಮ್ಮ ಅರಮನೆಯಲ್ಲಿ ತಾಯಿ ಭುವನೇಶ್ವರಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ತಮ್ಮ ಜೀವನ ಪರ್ಯಂತ ಆರಾಧಿಸಿದ್ದರು ಎಂದು ಹೇಳಿದರು.
ಪೂಜಾರಿಯ ಮಧ್ಯಸ್ಥಿಕೆ ಇಲ್ಲದೆ ಆರಾಧಿಸಬಹುದಾದ ಏಕೈಕ ದೈವ ತಾಯಿ ಭುವನೇಶ್ವರಿ ಇಂದು ಹೇಳಿದ ಅವರು ಕರ್ನಾಟಕ ಏಕೀಕರಣ ಹೋರಾಟಕ್ಕೆ ನಾಡ ದೇವತೆ ಭುವನೇಶ್ವರಿಯೇ ಸ್ಪೂರ್ತಿ ಎಂದು ಹೇಳಿದರು.

89ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಂಘಟಿಸಲು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಕೋರಿರುವುದು ನ್ಯಾಯ ಸಮ್ಮತವಾಗಿದೆ ವಿಶೇಷವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿಯೊಬ್ಬರು ಕನ್ನಡಿಗರೇ ಆಗಿದ್ದಾರೆ. ಅದರೊಂದಿಗೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸಂಘಟಿಸಲು ಅಗತ್ಯವಿರುವ ಕನ್ನಡದ ಕಟ್ಟಾಳುಗಳು ಸೌಲಭ್ಯಗಳು ಸಮರ್ಪಕವಾಗಿರುವುದರಿಂದ ಈ ಬಗ್ಗೆ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ಇಲ್ಲಿಯೇ ಸಮ್ಮೇಳನ ನಡೆಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದರು.

87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರು ಹಾಗೂ ಜಿಲ್ಲೆಯ ಹಿರಿಯ ಸಾಹಿತಿ ಗೊರೂರು ಚೆನ್ನಬಸಪ್ಪನವರು ಮಾತನಾಡಿ ಕರ್ನಾಟಕ ಏಕೀಕರಣಕ್ಕಾಗಿ ಜನ ಜಾಗೃತಿ ಮೂಡಿಸಿ ಹಗಲಿರುಳು ಶ್ರಮಿಸಿದರು ಹೋರಾಟಕ್ಕೆ ದೊರೆಯದಿದ್ದ ದಿನಗಳಲ್ಲಿ ಹೋರಾಟಕ್ಕೆ ಆಧ್ಯಾತ್ಮಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಕನ್ನಡದ ಕಟ್ಟಾಳು ಶಾಸಕರು ಆಗಿದ್ದ ಅಂದಾನಪ್ಪ ದೊಡ್ಡ ಮೇಟಿ ಯವರು 1953ರಲ್ಲಿ ಕಲಾವಿದರಿಂದ ಆಳೆತ್ತರದ ತಾಯಿ ಭುವನೇಶ್ವರಿಯ ಚಿತ್ರಪಟವನ್ನು ಚಿತ್ರಿಸಿ ಆ ಚಿತ್ರಣದ ಮೂಲಕ ಸ್ಪೂರ್ತಿಪಡೆದು ಹೋರಾಟವನ್ನು ಮುನ್ನಡೆಸಿದ್ದರು ಎಂದು ನೆನಪಿಸಿಕೊಂಡವರು.

ತಾಯಿ ಭುವನೇಶ್ವರಿ ಎಂಬ ದೇವತೆ ರಾಜಕೀಯ ಮತ್ತು ಸಾಂಸ್ಕೃತಿಕ ಹಿನ್ನೆಲೆಯಲ್ಲಿ ಹುಟ್ಟಿಕೊಂಡ ಶಕ್ತಿಯ ಪ್ರತೀಕ ಎಂದು ಹೇಳಿದರು. ಯಾರನ್ನು,ಯಾವುದನ್ನು ಕಣ್ಣಾರೆ ಕಾಣಲು ಆರಾಧಿಸಲು ಸಾಧ್ಯವಿಲ್ಲವೋ ಅವರನ್ನು ಪ್ರತಿಷ್ಠಾಪಿಸಿ ನಮಿಸುವುದು ಈ ದೇಶದ ಸಂಸ್ಕೃತಿ ಅದರಂತೆ ತಾಯಿ ಭುವನೇಶ್ವರಿಯನ್ನು ಪುತ್ಥಳಿ ರೂಪದಲ್ಲಿ ಪ್ರತಿಷ್ಟಾಪಿಸಲಾಗಿದೆಎಂದರು. ಸರಸ್ವತಿ ವಿದ್ಯೆಗೆ ಅಧಿಪತಿಯಾದರೆ ತಾಯಿ ಭುವನೇಶ್ವರಿ ಶಕ್ತಿ ಸ್ವರೂಪಿಣಿ ಎಂದರು.
ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರದ ಖ್ಯಾತ ವೈದ್ಯ ಜೆ.ಪಿಕೃಷ್ಣೇಗೌಡ ಮಾತನಾಡಿ ಕನ್ನಡ ಸೇವೆ ಅತ್ಯುನ್ನತವಾದದ್ದು ಅಂತಹ ಮಹಾನ್ ಸೇವೆಯನ್ನು ಮಾಡುತ್ತಿರುವ ನಾವು ನೀವೆಲ್ಲರೂ ಪುಣ್ಯವಂತರು ಎಂದು ಹೇಳಿದರು

ಇದೇ ಸಂದರ್ಭದಲ್ಲಿ ಪರಿಷತ್ತಿನ ಅಧ್ಯಕ್ಷಸೂರಿ ಶ್ರೀನಿವಾಸ್ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಕಚೇರಿಯಲ್ಲಿ ಹೊರತುಪಡಿಸಿದರೆ ತಾಯಿ ಭುವನೇಶ್ವರಿಯ ಪುತ್ತಳಿಯನ್ನು ಚಿಕ್ಕಮಗಳೂರು ಸಾಹಿತ್ಯ ಭವನದಲ್ಲಿ ಮಾತ್ರ ಪ್ರತಿಷ್ಠಾಪಿಸಿರುವುದು ಹೆಮ್ಮೆ ತಂದಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಭುವನೇಶ್ವರಿಯ ಮೂರ್ತಿಯ ದಾನಿಗಳಾದ ಡಾ. ಜೆಪಿ ಕೃಷ್ಣೇಗೌಡ, ಪ್ರಭುಸೂರಿ, ಶ್ರೀವತ್ಸರವರಿಗೆ ಕನ್ನಡ ಸಿರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಅದೇ ವೇದಿಕೆಯಲ್ಲಿ ಹಾಗೂ ಪುತ್ಥಳಿ ನಿರ್ಮಾಣಕ್ಕೆ ಸಹಕಾರ ನೀಡಿದ ನಗರದ ಛಾಯಾಗ್ರಹಕ ಎ.ಎನ್ ಮೂರ್ತಿ ಹಾಗೂ ಕ.ಸಾ.ಪ ನಗರ ಅಧ್ಯಕ್ಷ ಸಚಿನ್ ರವರಿಗೆ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾವಿದ್ಯಾಲಯದ ಉಪಕುಲಪತಿ, ಸಿ.ಕೆ ಸುಬ್ಬರಾಯ ಉಪಸ್ಥಿತರಿದ್ದರು ವಕೀಲ ವೆಂಕಟೇಶ್ ಸ್ವಾಗತಿಸಿ, ಮಹಾಲಕ್ಷ್ಮಿನಾಗರಾಜ್,ಸುನೀತಕಿರಣ್ ಪ್ರಾರ್ಥಿಸಿದರು.ರೂಪ ನಾಯಕ್ ನಿರೂಪಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ