7-mudigere-1

 

 

ಸರ್ಕಾದ ಆದೇಶದಂತೆ ರೈತರ ಪಂಪ್ ಸೆಟ್ ಗಳಿಗೆ ನಿಗದಿಪಡಿಸಿದ ವಿದ್ಯುತ್ ನೀಡುವಲ್ಲಿ ವಿಫಲವಾಗಿರುವ ಮತ್ತು ಅನಿಮಿಯತವಾಗಿ ವಿದ್ಯುತ್ ಕಡಿತ ಮಾಡುತ್ತಿರುವ ಮೆಸ್ಕಾಂ ಕಾರ್ಯವೈಖರಿ ವಿರೋಧಿಸಿ ರೈತರು ಮೆಸ್ಕಾಂ ಉಪಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿಯ ಮೆಸ್ಕಾಂ ಉಪಕೇಂಧ್ರಕ್ಕೆ ರೈತರು ಮತ್ತು ಬೆಳೆಗಾರರು ಹಾಗೂ ಸಾರ್ವಜನಿಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಮುಂದಾಳತ್ವವಹಿಸಿದ್ದ ರಾಜ್ಯ ರೈತಸಂಘದ ಉಪಾಧ್ಯಕ್ಷ ಎಂ.ಮಂಜುನಾಥ್ ಮಾತನಾಡಿ. ಈಗಾಗಲೇ ಮಲೆನಾಡಿನಲ್ಲಿ ಬಿರು ಬೇಸಿಗೆ ಪ್ರಾರಂಭವಾಗಿದ್ದು ಬೆಳೆಗಳು ಒಣಗಿ ಹೋಗುತ್ತಿದೆ. ಬೆಳೆಯೇ ನಮ್ಮ ಉಸಿರು. ಬೆಳೆ ಬೆಳೆಯಲು ಸಮಯಕ್ಕೆ ಸರಿಯಾಗಿ ಪಂಪ್ ಸೆಟ್ ಮೂಲಕ ರೈತರು ತಮ್ಮ ಜಮೀನುಗಳಿಗೆ ನೀರು ಹಾಕಬೇಕಾಗಿದ್ದು ಅನಿವಾರ್ಯ, ಸರ್ಕಾರ ರೈತರನೆರವಿಗೆ ಬಂದಿದ್ದು ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡುವಂತೆ ಸಮಯ ನಿಗದಿ ಪಡಿಸಿ ಆದೇಶ ಹೊರಡಿಸಿದ್ದರು. ದಾರದಹಳ್ಳಿ ಮೆಸ್ಕಾಂ ಉಪಕೇಂಧ್ರ ಸಂಪೂರ್ಣ ವಿಫಲವಾಗಿದೆ ನೀರಿಲ್ಲದೆ ಬೆಳೆಗಳು ಹಾಳಾಗುತ್ತಿದ್ದು ಇಲಾಖೇಯೆ ನಷ್ಟ ಪರಿಹಾರ ತುಂಬಿಕೊಡುವಂತೆ ಒತ್ತಾಯಿಸಿದರು.

ಸ್ಥಳಿಯ ಅಧಿಕಾರಿಗಳು ವಿದ್ಯುತ್ ಒದಗಿಸಲು ಉಪಕರಣಗಳ ಕೊರತೆ ಇದೆ ಎಂದು ಸಬೂಬು ಹೇಳುತ್ತಿದ್ದಾರೆ, ಅಸರ್ಮಪಕ ವಿದ್ಯುತ್‍ನಿಂದ ಮೀಟರ್ ಸುಟ್ಟು ಹೋದರೆ ರೈತರನ್ನು ಹೊಣೆಗಾರರನ್ನಾಗಿ ಮಾಡುತ್ತಿರುವುದು , ಬಡ್ಡಿ ಮತ್ತು ಅನಗತ್ಯ ತೆರಿಗೆಗಳ ಹೊರೆಯನ್ನು ರೈತರ ತಲೆಯ ಮೇಲೆ ಹೋರಿಸುತ್ತಿದ್ದು ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಡಿತಗೊಂಡ ವಿದ್ಯುತ್‍ ಅನ್ನು ಅದೇ ದಿನ ಮರು ಪೂರೈಕೆ ಮಾಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿದ್ಯುತ್ ಬಳಕೆದಾರರ ವೇದಿಕೆಯ ಅಧ್ಯಕ್ಷ ಭರತ್ ಮಡ್ಡಿಕೆರೆ, ಕೆಂಪೇಗೌಡ ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷ ಬ್ರಿಜೇಶ್‍ಗೌಡ, ರೈತಸಂಘದ ತಾಲ್ಲೂಕು ಅಧ್ಯಕ್ಷ ಡಿ.ಆರ್. ಪುಟ್ಟಸ್ವಾಮೇಗೌಡ, ಡಿ.ಎಸ್.ರಮೇಶ್ ಗೌಡ, ಮಂಜುನಾಥಗೌಡ ಹೊನ್ನೆಕೂಲು, ಲಕ್ಷ್ಮಣಗೌಡ, ಪ್ರಸಾದ್ ಬಕ್ಕಿ, ಪ್ರದೀನ್ ಕಿತ್ತಲೆಗಂಡಿ, ಸುನಿಲ್ ಕುಮಾರ್ ಹೆಸಗೋಡು, ಅಣ್ಣಪ್ಪ ಕಡಿದಾಳು, ಸುಜಿತ್, ವೆಂಕಟೇಶ್ ಹಳೇಕೆರೆ, ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಪಾಲ್ಗೊಂಡಿದ್ದರು.

24 ಗಂಟೆಗಳಲ್ಲಿ ಸಮರ್ಪಕ ವಿದ್ಯುತ್ ನೀಡದೇ ಇದ್ದಲ್ಲಿ ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯಾದಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ