ಈಜುಕೊಳದಲ್ಲಿ ಧುಮುಕಿದ ವೇಳೆ ಬೆನ್ನುಮೂಳೆಗೆ (Spinal Cord) ಘಾಸಿಯುಂಟಾಗಿ, ಚಿಕಿತ್ಸೆ ಫಲಿಸದೇ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪ ಖಾಸಗಿ ರೆಸಾರ್ಟ್ ನಲ್ಲಿ ಈ ದುರ್ಘಟನೆ ನಡೆದಿದೆ.
ಕೊಡಗು ಜಿಲ್ಲೆ ಕುಶಾಲನಗರದ ಮೊಬೈಲ್ ಶಾಪ್ ಮಾಲೀಕ ನಿಶಾಂತ್ (35) ಮೃತ ದುರ್ದೈವಿ. ನಿಶಾಂತ್ ಕೊಡಗಿನ ಕುಶಾಲನಗರದಿಂದ ಚಿಕ್ಕಮಗಳೂರಿಗೆ 10 ಮಂದಿ ಸ್ನೇಹಿತರೊಂದಿಗೆ ಶನಿವಾರ ಪ್ರವಾಸಕ್ಕೆ ಆಗಮಿಸಿದ್ದರು. ಭಾನುವಾರ ಇಲ್ಲಿನ ಖಾಸಗಿ ರೆಸಾರ್ಟ್ನ ಸ್ವಿಮ್ಮಿಂಗ್ ಪೂಲ್ಗೆ ಧುಮುಕುವ ವೇಳೆ ಆಯಾ ತಪ್ಪಿದ್ದು ಬೆನ್ನುಮೂಳೆಗೆ ಘಾಸಿಯಾಗಿದೆ.
ತಕ್ಷಣವೇ ನಿಶಾಂತ್ರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎನಪೋಯಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಶಾಂತ್ ಕೊನೆಯುಸಿರೆಳೆದಿದ್ದಾರೆ.



