ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣ ಸಮಿತಿಯ ಚಿಕ್ಕಮಗಳೂರು ಜಿಲ್ಲಾ ಮಟ್ಟದ ಸಂವಾದ ಸಭೆಯನ್ನು ಇತ್ತೀಚೆಗೆ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಸಭೆಯಲ್ಲಿ ಶಾಸಕರಾದ ಟಿ.ಡಿ.ರಾಜೇಗೌಡ, ಜಿ.ಎಚ್. ಶ್ರೀನಿವಾಸ್, ಎಚ್.ಡಿ.ತಮ್ಮಯ್ಯ, ಜಿಲ್ಲಾ ಪಂಚಾಯಿತಿ ಸಿಇಓ, ವಿವಿಧ ಇಲಾಖೆಗಳ ಅಧಿಕಾರಿಗಳು, ಆರ್ಥಿಕ ತಜ್ಞರಾದ ಡಾ. ಸೂರ್ಯನಾರಾಯಣ ರಾವ್ ಶಾಂತಾರಾಮ ಹೆಗಡೆ, ಅಧ್ಯಕ್ಷರು, ಚೇಂಬರ್ ಆಫ್ ಕಾಮರ್ಸ್ ಚಿಕ್ಕಮಗಳೂರು, ಮಹೇಶ್, ಜಿಲ್ಲಾ ಕೈಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರು, ಇತರೆ ಸಂಘಟನಾ ಸಂಸ್ಥೆಗಳು ಉಪಸ್ಥಿತರಿದ್ದರು.
ಸಮಿತಿಗೆ ಸಾಮಾಜಿಕ ಕಾರ್ಯಕರ್ತರಾದ ಬಿಜೆಪಿ ಮುಖಂಡ ಡಾ. ಶಿವಪ್ರಸಾದ್ ಅವರು ಈ ಕೆಳಗಿನ ಬೇಡಿಕೆಗಳನ್ನು ಸಲ್ಲಿಸಿದರು.
1. KSSIDC ಯಿಂದ ಮೂಡಿಗೆರೆಗೆ- ಕಳಸ ಭಾಗದಲ್ಲಿ ಮಲೆನಾಡು ಫುಡ್ ಪಾರ್ಕ್ ಸ್ಥಾಪಿಸುವುದು
2. ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ
3. ಜಿಲ್ಲೆಗೆ ರಸ್ತೆ/ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ
ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಯ ಕುರಿತಂತೆ ಶಾಸಕರುಗಳು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಲವಾರು ಅಹವಾಲುಗಳನ್ನು ಸಲ್ಲಿಸಿದರು.



