beekanahalli

 

 

ಪ್ರಪಂಚದಲ್ಲಿಯೇ ಧರ್ಮದ ಆಧಾರದಲ್ಲಿ ಭಾರತ ಧಾರ್ಮಿಕವಾಗಿ ನೆಲೆ ಹೊಂದಿದ್ದು, ದೇಶ ಮತ್ತು ಧರ್ಮ ಇದ್ದರೆ ಮಾತ್ರ ನೆಮ್ಮದಿ ಬದುಕಿಗೆ ನಾಂದಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಭಿಪ್ರಾಯಿಸಿದರು.

ಅವರು ಸಮೀಪದ ಬೀಕನಹಳ್ಳಿಯಲ್ಲಿ ಶ್ರೀ ಕಾಳಮ್ಮ ಮತ್ತು ಶ್ರೀ ಚಿಕ್ಕಮ್ಮ ದೇವಿಯವರ ನೂತನ ದೇವಾಲಯ ಪ್ರವೇಶೋತ್ಸವ ನೂತನ ವಿಗ್ರಹ ಪ್ರತಿಷ್ಠಾಪನೆ, ಕುಂಭಾಭಿಷೇಕ, ಕಳಸಾರೋಹಣ ಧಾರ್ಮಿಕ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರ ನೀಡುವ ಅನುದಾನದ ಜೊತೆಗೆ ಗ್ರಾಮಸ್ಥರು ಒಟ್ಟಾಗಿ ಸೇರಿ ಹಣ ಸಂಗ್ರಹಿಸಿ ದೇವಾಲಯ ನಿರ್ಮಾಣ ಮಾಡಿರುವುದು ಹೆಮ್ಮೆಯ ವಿಚಾರ ಎಂದ ಅವರು, ಹಿಂದೆ ಬ್ರಿಟೀಷರು ಘಜ್ನಿ ಮಹಮದ್ ದಾಳಿ ಮಾಡಿದ್ದರೂ ಭಾರತದಲ್ಲಿ ಧರ್ಮ ಮತ್ತು ಸಂಸ್ಕಾರ ಉಳಿದಿದೆ ಎಂದು ಹೇಳಿದರು.

ದೇಶದಲ್ಲಿ ಧರ್ಮ, ಸಂಸ್ಕೃತಿ ನಾಶವಾಗದೇ ಇರುವುದಕ್ಕೆ ಕಾರಣ ಮುಕ್ಕೋಟಿ ದೇವರುಗಳ ಆಶೀರ್ವಾದದ ಫಲ. ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಸುಮಾರು ೨೬ ಜನ ಪ್ರವಾಸಿಗರು ಹತ್ಯೆಯಾಗಿರುವುದನ್ನು ಖಂಡಿಸಿದ ಅವರು, ತಿರಂಗ ಯಾತ್ರೆ ನಡೆಸುವ ಮೂಲಕ ಸೇನೆಗೆ ಬಲ-ಬೆಂಬಲ ತುಂಬುವ ಕೆಲಸವನ್ನು ರಾಜ್ಯಸರ್ಕಾರ ಮಾಡಿದೆ ಎಂದು ಶ್ಲಾಘಿಸಿದರು.

ದೇವಾಲಯಗಳನ್ನು ನಿರ್ಮಿಸುವ ಜೊತೆಗೆ ಧಾರ್ಮಿಕ ಭಾವನೆ, ಸಂಸ್ಕಾರ ಕಲಿಯುತ್ತೇವೆ. ಹಾಗೆಯೇ ಹಣ್ಣು, ಕಾಯಿ, ನೀರು ಗರ್ಭಗುಡಿಗೆ ಹೋದಾಗ ಪ್ರಸಾದ, ತೀರ್ಥವಾಗುತ್ತದೆ. ದೇವಾಲಯಗಳಿಗೆ ಹೋದ ನಾವು ಸಂಸ್ಕಾರವಂತ ಪ್ರಜೆಗಳಾದರೆ ದೇಶ ಸುಭದ್ರವಾಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಈ ದೇವತೆಗಳ ಕೃಪೆಯಿಂದ ಸರ್ವ ಗ್ರಾಮಸ್ಥರ ಬದುಕು ಸಕಾರಾತ್ಮಕವಾಗಲಿ, ಜಾತಿ, ಬೇಧಭಾವ ಇಲ್ಲದೆ ನಮ್ಮನ್ನೆಲ್ಲ ದೇವರು ಸೃಷ್ಟಿಮಾಡಿದ್ದಾರೆ ಎಂಬ ಭಾವನೆ ಬೆಳೆಯಲಿ ಎಂದು ಹೇಳಿದರು.

ಮೇಲು-ಕೀಳು ದೇವರು ಮಾಡಿಲ್ಲ, ದೇವರ ಹೆಸರಿನಲ್ಲಿ ಇವುಗಳನ್ನು ಮಾಡಬಾರದು. ಸ್ವಾಮಿ ವಿವೇಕಾನಂದರು ವೇದಗಳಿಗೆ ಹಿಂದುರುಗಿ ಎಂದು ಹೇಳಿದಂತೆ ವೇದಗಳಲ್ಲಿ ಜಾತಿ, ಮತ, ಅಸ್ಪೃಷ್ಯತೆ ಇರುವುದಿಲ್ಲ. ಬದಲಾಗಿ ಎಲ್ಲರನ್ನೂ ಭಗವತ್ ಸ್ವರೂಪಿಯಾಗಿ ನೋಡುವ ದೃಷ್ಟಿ ಇದೆ ಎಂದು ತಿಳಿಸಿದರು.

ಸನಾತನ ಪ್ರತೀಕವಾದ ದೇವಾಲಯಗಳು ದೇವನೊಬ್ಬ ನಾಮ ಹಲವು, ವಿವಿಧ ರೂಪದಲ್ಲಿ ವ್ಯಕ್ತವಾಗುತ್ತಿದ್ದಾನೆ, ನಾವು ನಮ್ಮ ಪರಿಕಲ್ಪನೆಯಂತೆ ಗುಡಿ ಕಟ್ಟಿ ಪೂಜಿಸುತ್ತಿದ್ದೇವೆ ಎಂಬ ಸತ್ಯವನ್ನು ಮರೆಯಬಾರದು ಎಂದರು.

ದೇವರ ಉತ್ಸವಗಳು ಸರ್ವರ ಉತ್ಸವಗಳಾಗಿ ಎಲ್ಲರೂ ಸೇರಿ ಮಾಡುವ ಉತ್ಸವದ ಜೊತೆಗೆ ಆನಂದ ಕೊಡುವಂತಾಗಲಿ. ಸಂತೋಷವಾಗಿರಲು ಹಬ್ಬಗಳನ್ನು ಆಚರಿಸುತ್ತೇವೆ. ಜಗಳ ದ್ವೇಷಕ್ಕೆ ಅಲ್ಲ, ಪ್ರೀತಿಸೆಲೆಯನ್ನು ದೇವಾಲಯಗಳು ಹುಟ್ಟಿಸುವಂತಾಗಲಿ ಎಂದು ಹಾರೈಸಿದರು.

ದೇವಸ್ಥಾನಕ್ಕೆ ಬಂದ ತಕ್ಷಣ ಆತ್ಮಸಾಕ್ಷಿ ಎಚ್ಚರಿಸಬೇಕು, ಒಳ್ಳೆಯದು, ಕೆಟ್ಟದು, ತಪ್ಪು-ಸರಿ ಎಂಬುದರ ಬಗ್ಗೆ ಎಚ್ಚರಿಕೆ ಮೂಡಿಸುವ ಗಂಟೆಯಾಗಬೇಕು ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ ಮಾತನಾಡಿ, ಈ ದೇವಾಲಯಗಳಿಗೆ ಶಾಸಕರ ಅನುದಾನದಲ್ಲಿ ೧೦ ಲಕ್ಷ ರೂ ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ೬ ಲಕ್ಷ ರೂ ಅನುದಾನವನ್ನು ಶಾಸಕರು ನೀಡಿದ್ದಾರೆ. ಬಡವರ ದೀನ-ದಲಿತರ ಕಷ್ಟಕಾರ್ಪಣ್ಯಗಳಿಗೆ ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಸ್ಪಂದಿಸಿ ಕೆಲಸಮಾಡುತ್ತಿದ್ದಾರೆಂದು ತಿಳಿಸಿದರು.

ದೇವಾಲಯಗಳ ಪ್ರಾರಂಭೋತ್ಸವದ ಅಂಗವಾಗಿ ಮೇ.೯ ರಿಂದ ೧೧ ರವರೆಗೆ ಸಾರ್ವಜನಿಕ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಉಪಾಧ್ಯಕ್ಷ ಬಿ.ಜಿ. ಸೋಮಶೇಖರ್, ಮರುಳ ಸಿದ್ದೇಶ್ವರ ಹಾರ್ಡ್‌ವೇರ್‌ನ ಬಿ.ಎನ್. ರಾಜಶೇಖರ್, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ವೆಂಕಟೇಶ್, ತಾ.ಪಂ ಮಾಜಿ ಅಧ್ಯಕ್ಷ ಪುಟ್ಟೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ಪಿ. ರಾಜು, ಗ್ರಾ.ಪಂ ಅಧ್ಯಕ್ಷೆ ಮಂಜುಳ ಶಿವಣ್ಣ, ಸದಸ್ಯರುಗಳಾದ ಬಿ.ಎಂ. ಯೋಗೀಶ್, ಬಿ.ವಿ. ವಿಜಯಕುಮಾರ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ