ಗೂಗಲ್ ಮ್ಯಾಪ್ ಹಾಕಿಕೊಂಡು ಬಂದ ಪ್ರವಾಸಿಗರ ವಾಹನ ಗದ್ದೆಗೆ ಇಳಿದು ಪರದಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಬಳಿ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಆಲ್ದೂರು ಸಮೀಪ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.
ಪ್ರವಾಸಿಗರ ಪರದಾಟ ನೋಡಿ, ಸ್ಥಳೀಯರು ಟ್ರ್ಯಾಕ್ಟರ್ಗೆ ಟಿಟಿಯನ್ನು ಕಟ್ಟಿ, ರಸ್ತೆಯ ಬಳಿ ತಂದು ಬಿಟ್ಟಿದ್ದಾರೆ. ಬಳಿಕ ಸ್ಥಳಿಯರಿಂದ ರಸ್ತೆಯ ಬಗ್ಗೆ ಮಾಹಿತಿ ಪಡೆದು ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.



