ಹಸಿರು ಫೌಂಡೇಶನ್ ವತಿಯಿಂದ ಮೂಡಿಗೆರೆ ತಾಲ್ಲೂಕಿನ ಭೈರಾಪುರ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ಎತ್ತಿನ ಭುಜ ಪ್ರದೇಶದಲ್ಲಿ ಶನಿವಾರ ಸ್ವಚ್ಛತಾ ಕಾರ್ಯ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ರಾಜ್ಯದ ನಾನಾ ಭಾಗಗಳಿಂದ ಬಂದ ಪರಿಸರ ಪ್ರೇಮಿಗಳು ಅಬ್ಬರದ ಮಳೆಯನ್ನು ಲೆಕ್ಕಿಸದೆ ಸ್ವಚ್ಚತಾ ಕಾರ್ಯದಲ್ಲಿ ಮತ್ತು ಬೀಜದ ಉಂಡೆಗಳ ಬಿತ್ತನೇ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಎತ್ತಿನ ಭುಜಕ್ಕೆ ಸಾಗುವ ದಾರಿಯುದ್ದಕ್ಕೂ ಪ್ರವಾಸಿಗರು ಎಸೆದಿದ್ದ ಪ್ಲಾಸ್ಟಿಕ್ ಬಾಟಲ್ ಮುಂತಾದ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಈ ಪ್ರದೇಶದ ಸುತ್ತಮುತ್ತಲ ಕಾಲಿ ಜಾಗದಲ್ಲಿ ಬೀಜದ ಉಂಡೆಗಳನ್ನು ಬಿತ್ತಲಾಯಿತು.
ಈ ಊರುಬಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು, ಸ್ಥಳೀಯ ಹೋಮ್ ಸ್ಟೇ ಗಳ ಮಾಲೀಕರು ಸಹಕಾರ ನೀಡಿದ್ದರು.

ಹಸಿರು ಫೌಂಡೇಶನ್ ಅಧ್ಯಕ್ಷ ರತನ್ ಊರುಬಗೆ, ಕಾರ್ಯದರ್ಶಿ ಅಭಿಜಿತ್ ಹೆಡದಾಳು ಹಾಗೂ ಪದಾಧಿಕಾರಿಗಳು ಈ ಕಾರ್ಯಕ್ರಮವನ್ನು ಸಂಘಟಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.



