ಮೂಡಿಗೆರೆ ತಾಲ್ಲೂಕು ಗೋಣಿಬೀಡು ಜೇಸಿಐ ಹೊಯ್ಸಳ ಸಂಸ್ಥೆಯ ವತಿಯಿಂದ ಪ್ರಯಸ್ ಡೇ ಅಂಗವಾಗಿ ಮಹಿಳೆಯರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಗೋಣಿಬೀಡು ಸಮೀಪದ ಸೀಗೇಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಕಿರುಗುಂದ ಸಮುದಾಯ ಆರೋಗ್ಯ ಕೇಂದ್ರದ ಶುಶ್ರೂಷಕಿ ಕುಮಾರಿ ಮಹಿಳೆಯರಿಗೆ ಆರೋಗ್ಯ ಮಾಹಿತಿಯನ್ನು ನೀಡಿದರು.
ಮಹಿಳೆಯರಿಗೆ sanitary napkins ವಿತರಣೆ ಮಾಡಲಾಯಿತು ಶುಶ್ರೂಷಕಿ ಕುಮಾರಿ ಅವರ ಸೇವೆ ಗುರುತಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗೋಣಿಬೀಡು ಜೇಸಿಐ ಹೊಯ್ಸಳ ಅಧ್ಯಕ್ಷ ಜಗತ್ ಬಿ ಎಂ ಹಾಗೂ ಪೂರ್ವ ಅಧ್ಯಕ್ಷ ಯೋಗೀಶ್ ಕುಮಾರ, ಚಂದ್ರಶೇಖರ ಸಿ ಎಸ್, ಗೋಣಿಬೀಡು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಾಹಿತ್ಯ, ಅಂಗನವಾಡಿ ಕಾರ್ಯಕರ್ತೆ ರುಕ್ಮಿಣಿ, ಆಶಾ ಕಾರ್ಯಕರ್ತೆಯರು, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.



