etthina buja

 

 

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಜುಲೈ 1 ರಿಂದ 31 ರವರೆಗೆ ಒಂದು ತಿಂಗಳು ಎತ್ತಿನಭುಜ ಚಾರಣವನ್ನು ಬಂದ್ ಮಾಡಲಾಗಿದೆ.

ಮೂಡಿಗೆರೆ  ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರದ ಸುಪ್ರಸಿದ್ಧ ಎತ್ತಿನಭುಜಕ್ಕೆ ಪ್ರವಾಸಿಗರು 3 ಕಿ.ಮೀ. ಚಾರಣ ಮಾಡಿ   ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. ಆದರೆ ಈ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಭಾರೀ ಮಂಜು ಕವಿಯುತ್ತಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಚಾರಣಕ್ಕೆ ಬ್ರೇಕ್ ಹಾಕಿದೆ.

ಚಾರಣ ಮಾಡುವ ವೇಳೆ ಅನಾಹುತವಾದರೆ ರಕ್ಷಣೆ ಮಾಡೋದು ಭಾರೀ ಕಷ್ಟಸಾಧ್ಯ. ಜೊತೆಗೆ ಯಾವುದೇ ವಾಹನಗಳು ಹೋಗುವುದಿಲ್ಲ, ಹೊತ್ತೇ ತರಬೇಕು. ಅಲ್ಲದೇ ಕಾಡುಪ್ರಾಣಿಗಳ ಕಾಟ, ಮಳೆ, ಜಾರುವ ಪ್ರದೇಶವಾಗಿದ್ದು, ಸ್ಥಳೀಯರು ಚಾರಣವನ್ನ ಬಂದ್ ಮಾಡುವಂತೆ ಆಗ್ರಹಿಸಿದ್ದರು. ಹೀಗಾಗಿ ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು  ಒಂದು ತಿಂಗಳ ಕಾಲ ಸಂಪೂರ್ಣ ಬಂದ್ ಮಾಡಿದ್ದಾರೆ.

ಸದ್ಯ ಎತ್ತಿನಭುಜದಲ್ಲಿ ಓರ್ವ ಕಾವಲುಗಾರನ ನೇಮಿಸಲು ಸೂಚಿಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ