ಕೆರೆಯಲ್ಲಿ ಈಜಲು ಹೋಗಿ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ಉಪ್ಪಳ್ಳಿ ಸಮೀಪದ ಕುಂಬಾರಕಟ್ಟೆ ಕೆರೆಯಲ್ಲಿ ಶುಕ್ರವಾರ ಈ ದುರ್ಘಟನೆ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಬ್ಯಾಗಡೇಹಳ್ಳಿ ಗ್ರಾಮದ ರಂಜಿತ್ (15) ಮೃತ ಬಾಲಕ, ಗುರುವಾರ ಶಾಲೆಗೆ ಎಂದು ಬಂದಿದ್ದ ಬಾಲಕ ಶಾಲೆ ರಜೆ ಎಂದು ಕೆರೆಯಲ್ಲಿ ಈಜಲು ಹೋಗಿದ್ದ ಎನ್ನಲಾಗಿದೆ.
ಮಳೆ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿಗೆ ರಜೆ ನೀಡಿದ್ದ ಜಿಲ್ಲಾಡಳಿತ, ಶಾಲೆಗೆ ರಜೆ ಇದ್ದಿದ್ದರಿಂದ ಈಜಲು ಹೋಗಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ವಿದ್ಯಾರ್ಥಿ.
ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಂದ ಶವ ಪತ್ತೆ, ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



