indavara

 

 

ಚಿಕ್ಕಮಗಳೂರು ತಾಲ್ಲೂಕಿನ ಇಂದಾವರ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಐ.ಬಿ.ಸುಭಾಶ್ ಅವರು ಇಂದು ಅವಿರೋಧವಾಗಿ ಆಯ್ಕೆಯಾದರು.

ಸೋಮವಾರ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಐ.ಬಿ. ಸುಭಾಶ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಘೋಷಣೆ ಮಾಡಲಾಯಿತು.

ನೂತನ ಅಧ್ಯಕ್ಷರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ಮಾತನಾಡಿ, ಮಾಜಿ ಶಾಸಕ ಸಿ.ಟಿ. ರವಿ ಅವರು ಈ ಗ್ರಾಮ ಪಂಚಾಯಿತಿಗೆ ಅತಿ ಹೆಚ್ಚು ಅನುದಾನ ನೀಡಿ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಈ ನಿಟ್ಟಿನಲ್ಲಿ ಸಿ.ಟಿ. ರವಿ ಶಿಷ್ಯರಾದ ಸುಭಾಶ್ ರವರು ಆಯ್ಕೆಯಾಗಿರುವುದು ಅಭಿನಂದನೀಯ ಎಂದರು.

ತಮ್ಮ ಅಧಿಕಾರವಧಿಯಲ್ಲಿ ಅಧ್ಯಕ್ಷರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾ.ಪಂ. ಆಡಳಿತದಲ್ಲಿ ಹೊಸ ಬದಲಾವಣೆ ತಂದು ಮಾದರಿ ಪಂಚಾಯಿತಿಯನ್ನಾಗಿ ರೂಪಿಸಬೇಕು ಎಂದು ತಿಳಿಸಿದರು. ಇಂದಾವರ ಗ್ರಾಮದ ಸೊಸೈಟಿ ಸೇರಿ ದಂತೆ ಗ್ರಾ.ಪಂ. ಆಡಳಿತಕ್ಕೆ ಉತ್ಸಾಹಿ ಯುವಕರು ಅಧ್ಯಕ್ಷರಾಗಿರುವುದು ಹೆಮ್ಮೆಯ ಸಂಗತಿ. ಆ ಹಿನ್ನೆಲೆಯಲ್ಲಿ ಕಸದ ಡಂಪಿಂಗ್ ಸಮಸ್ಯೆಯಿಂದಾಗಿ ತೊಂದರೆಯಿಂದ ಬಳಲುತ್ತಿರುವ ಗ್ರಾಮದ ನಿವಾಸಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ನಗರಸಭೆಯೊಂದಿಗೆ ಚರ್ಚಿಸಿ ಬಗೆಹರಿಸಬೇಕು ಕಿವಿಮಾತು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸೋಮಶೇಖರ್ ಮಾತನಾಡಿ, ಎಲ್ಲಾ ಸದಸ್ಯರ ಸಹಕಾರ ಮತ್ತು ವಿಶ್ವಾಸವನ್ನು ಪಡೆದು ಅವಿರೋಧ ಆಯ್ಕೆಯಾಗಿರುವ ಸುಭಾಶ್‌ರವರು ಪಂಚಾಯಿತಿ ವ್ಯಾಪ್ತಿಯಲ್ಲಿ ಜನಸಾಮಾನ್ಯರ ಮೂಲಭೂತ ಸೌಲಭ್ಯಗಳಾದ ಕುಡಿಯವ ನೀರು, ಚರಂಡಿ, ರಸ್ತೆ ಹಾಗೂ ಜಾನುವಾರುಗಳಿಗೆ ಅನುಕೂಲವಾಗುವ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿಕೊಡುವ ಮೂಲಕ ಗ್ರಾಮಸ್ಥರ ವಿಶ್ವಾಸಾರ್ಹತೆಗೆ ಪಾತ್ರವಾಗಿ ಮುಂದಿನ ಚುನಾವಣೆಯನ್ನು ಆತ್ಮವಿಶ್ವಾಸದಿಂದ ಎದುರಿಸುವ ವಾತಾವರಣ ನಿರ್ಮಿಸಬೇಕು ಎಂದರು.

ಇಂದಾವರ ನಗರಕ್ಕೆ ಸಮೀಪವಾಗಿರುವ ಗ್ರಾಮ ಪಂಚಾಯಿತಿ ಆಗಿದೆ. ಹಿಂದಿನ ಶಾಸಕರ ಅಭಿವೃದ್ಧಿ ಕಾರ್ಯಗಳಿಂದ ಗ್ರಾಮವು ಆರ್ಥಿಕವಾಗಿ ಬಲಿಷ್ಟವಾಗಿದೆ. ಹೀಗಾಗಿ ಮತಕೊಟ್ಟ ಮತದಾರರಿಗೆ ಯಾವುದೇ ತೊಂದರೆಗಳಾಗದಂತೆ ನಿಷ್ಟೆಯಿಂದ ಕಾರ್ಯನಿರ್ವಹಿಸುವ ಜವಾಬ್ದಾರಿ ನೂತನ ಅಧ್ಯಕ್ಷರದ್ದು ಎಂದು ಹೇಳಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಐ.ಬಿ. ಸುಭಾಶ್, ಗ್ರಾಮಸ್ಥರು, ಸದಸ್ಯರುಗಳ ಸಹಕಾರಿಂದ ಸಿಕ್ಕಿರುವ ಅವಧಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ ಅವರು, ಜನರ ಕುಂದುಕೊರತೆಗಳನ್ನು ಆಲಿಸಿ ಸರ್ಕಾರದ ಸವಲತ್ತುಗಳನ್ನು ತಾರತಮ್ಯವಿಲ್ಲದೆ ನಿಷ್ಟೆಯಿಂದ ತಲುಪಿಸುವ ಕಾರ್ಯಮಾಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್‌ ಶೆಟ್ಟಿ ಗ್ರಾ.ಪಂ. ಉಪಾಧ್ಯಕ್ಷೆ ದ್ರಾಕ್ಷಯಣಿ, ಸದಸ್ಯರಾದ ಜ್ಯೋತಿ ಯೋಗಿಶ್, ನೇತ್ರಾವತಿ, ಕೆಂಚಯ್ಯ, ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹೆಚ್.ಸಿ. ಕಲ್ಮರುಡಪ್ಪ, ಇಂದಾವರ ಸಹಕಾರ ಸಂಘದ ಅಧ್ಯಕ್ಷ ಯತೀಶ್ ಗೌಡ, ಮುಖಂಡರುಗಳಾದ ಕೋಟೆ ರಂಗನಾಥ್, ನಿರಂಜನ್, ಕುರುವಂಗಿ ವೆಂಕಟೇಶ್, ರಾಜೀವ್, ಮಧುಕುಮಾರ್ ಅರಸ್, ಹಂಪಯ್ಯ, ಸಂತೋಷ್ ಕೋಟ್ಯಾನ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ