ಮೂಡಿಗೆರೆ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು. ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಮುಖಂಡರು ಪಟ್ಟಣದ ಪ್ರಮುಖ ರಸ್ತೆಯಲ್ಲಿ ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆ ನಡೆಸುವ ಮೂಲಕ ಸಂಭ್ರಮದಿಂದ ಆಚರಿಸಿದರು.
ಮೂಡಿಗೆರೆ ಅಮರ್ ಜವಾನ್ ವೃತ್ತದ ಬಳಿ ನಿವೃತ್ತ ಯೋಧರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶ್ರೀಜಿತ್, ತಾಲೂಕು ಅಧ್ಯಕ್ಷ ಮೊಹಮ್ಮದ್ ಇಮ್ರಾನ್ ಮುಖಂಡರಾದ ಮೆಲ್ವಿನ್, ಸಂಪತ್, ಜಗನ್ನಾಥ್, ಸುಬೋಧ್, ತೇಜಸ್, ರಾಮದೇವ್, ಆಶಿಕ್, ಅನಿಲ್, ಅಶ್ವಿನ್, ತೌಫಿಕ್ ಮತ್ತಿತರರಿದ್ದರು.



