ಕರ್ನಾಟಕ ಪ್ರದೇಶ ಕಾಂಗ್ರೇಸ್ ಕಮಿಟಿ ಪ್ರಚಾರ ಸಮಿತಿ (ಕೆಪಿಸಿಸಿ) ಸಂಯೋಜಕರಾಗಿ ಎಂ.ಎಸ್.ಅನಂತ್ ನೇಮಕವಾಗಿದ್ದಾರೆ.
ಮೂಡಿಗೆರೆ ಕಸಬಾ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಎಂ.ಎಸ್. ಅನಂತ್ ಅವರು ಪ್ರಸ್ತುತ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೇಸ್ ವಕ್ತಾರರಾಗಿದ್ದಾರೆ.
ಈ ಹಿಂದೆ ತೆಲಂಗಾಣ ವಿಧಾನಸಭೆ ಚುನಾವಣೆ, ಉತ್ತರ ಕನ್ನಡ ಜಿಲ್ಲೆ ಶಿಗ್ಗಾಂವ್ ಉಪ ಚುನಾವಣೆ ವೀಕ್ಷಕರಾಗಿ ಕೆಲಸ ಮಾಡಿದ್ದ ಅನುಭವ ಗುರುತಿಸಿ ಎಂಎಸ್.ಅನಂತ್ ಅವರನ್ನು ಕೆಪಿಸಿಸಿ ಸಂಯೋಜಕರನ್ನಾಗಿ ನೇಮಕಗೊಳಿಸಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕ ಪ್ರದೇಶ ಕಾಂಗ್ರೇಸ್ ಪ್ರಚಾರ ಸಮಿತಿ ಸದಸ್ಯರಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಎಂ.ಎಸ್. ಅನಂತ್ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ 33 ಮಂದಿಯನ್ನು ಪ್ರಚಾರ ಸಮಿತಿಗೆ ನೇಮಕ ಮಾಡಲಾಗಿದೆ.
ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅನಂತ್ ; ನನ್ನನ್ನು ರಾಜ್ಯ ಮಟ್ಟದ ಪ್ರಚಾರ ಸಮಿತಿ ನೇಮಕ ಮಾಡಿದ ಪಕ್ಷದ ರಾಷ್ಟ್ರ ಮತ್ತು ರಾಜ್ಯ ನಾಯಕರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈ ಹುದ್ದಯಿಂದ ಪಕ್ಷಕ್ಕೆ ಸೇವೆ ಸಲ್ಲಿಸುವ ಸದಾವಕಾಶ ದೊರೆತ್ತಿದ್ದು ಇದರ ಸದುಪಯೋಗಪಡಿಸಿಕೊಂಡು ಪಕ್ಷ ಸಂಘಟನೆಗೆ ಒತ್ತು ನೀಡುವುದಾಗಿ ತಿಳಿಸಿದ್ದಾರೆ.




