ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ನಾಳೆ(18-8-2025, ಸೋಮವಾರ) ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡಿನ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ,NR ಪುರ ತಾಲೂಕಿನಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ಅವತಿ, ಜಾಗರ, ವಸ್ತಾರೆ, ಆಲ್ದೂರು, ಖಾಂಡ್ಯ ಹೋಬಳಿ ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಳೆದ ಎರಡು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ವ್ಯಾಪಕವಾದ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಗಾಳಿಯೂ ಬೀಸುತ್ತಿದೆ. ಹವಾಮಾನ ಇಲಾಖೆ ಇನ್ನೂ ಎರಡು ದಿನ ಅಧಿಕ ಮಳೆಯ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಸೋಮವಾರ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.




