ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ನಾಳೆ ದಿನಾಂಕ 30-08-2025 ಶನಿವಾರ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಕಳಸ ,ಮೂಡಿಗೆರೆ, ಶೃಂಗೇರಿ ,ಕೊಪ್ಪ, NR ಪುರ ತಾಲೂಕು, ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ
ತರೀಕೆರೆ ತಾಲೂಕಿನ ಲಕ್ಕವಳ್ಳಿ ,ಲಿಂಗದಹಳ್ಳಿ ಹೋಬಳಿ ರಜೆ ಘೋಷಣೆ.
ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.
ಮಲೆನಾಡು ,ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ



