ಬುಧವಾರ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಭೇಟಿ ನೀಡಿದ ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರ ಸಮ್ಮುಖದಲ್ಲಿ ಹಸಿರು ಫೌಂಡೇಷನ್ ( ರಿ) ಸಂಸ್ಥೆಯ ನೇತೃತ್ವದಲ್ಲಿ ಊರುಬಗೆ ಗ್ರಾಮ ಪಂಚಾಯ್ತಿ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಇದೆ ಸಂದರ್ಭದಲ್ಲಿ ಹಸಿರು ಫೌಂಡೇಷನ್ ಸಂಸ್ಥೆಗೆ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ನಬಾರ್ಡ್ ವತಿಯಿಂದ ಅನುದಾನ ಬಿಡುಗಡೆ ಮಾಡಿಸಿಕೊಡಬೇಕಾಗಿ ಹಸಿರು ಫೌಂಡೇಷನ್ ಅಧ್ಯಕ್ಷ ರತನ್ ಊರುಬಗೆ ಹಾಗೂ ಪದಾಧಿಕಾರಿಗಳು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಊರುಬಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಸದಸ್ಯರು, ವಿವಿಧ ಪಕ್ಷಗಳ ಮುಖಂಡರು, ಗ್ರಾಮಸ್ಥರು, ಹಸಿರು ಫೌಂಡೇಷನ್ ಫೀಲ್ಡ್ ಕೋರ್ಡಿನೆಟರ್ ಅದೀಪ್ ಊರುಬಗೆ, ನಿರ್ದೇಶಕರಾದ ಪ್ರದೀಪ್ ಊರುಬಗೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.




