ಸಿವಿಲ್

 

 

ತಂದೆ ತಾಯಿಯಿಂದ ಆಸ್ತಿಯನ್ನು ಪಡೆದ ನಂತರ ಅವರ ಪಾಲನೆ, ಪೋಷಣೆ ಮಾಡದಿದ್ದರೆ ಕಾನೂನಿನ ಮೂಲಕ ಆಸ್ತಿ ವಾಪಸ್ಸು ಪಡೆದುಕೊಳ್ಳುವ ಅವಕಾಶವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವಿ.ಹನುಮಂತಪ್ಪ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕೆಂಪನಹಳ್ಳಿಯ ಆಶಾಕಿರಣ ಅಂಧ ಮಕ್ಕಳ ವಸತಿಯುತ ಪಾಠಶಾಲೆಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಇಂದು ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹಿರಿಯರ ಹಿತದೃಷ್ಟಿಯನ್ನು ಕಾಪಾಡುವ ಸಲುವಾಗಿ ಹಿರಿಯರ ಪೋಷಣೆ ಮತ್ತು ಸಂರಕ್ಷಣೆ ಕಾಯ್ದೆ ಜಾರಿಗೆ ಬಂದಿದೆ ಎಂದ ಅವರು, ಜಿಲ್ಲಾ ಕಾನೂನು ಪ್ರಾಧಿಕಾರವು ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ತಮ್ಮ ಹಕ್ಕುಗಳು ಮತ್ತು ಕಾನೂನಿನ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಕೂಡ ಮಾಡುತ್ತಿದೆ ಎಂದು ಹೇಳಿದರು.

ಈ ದಿನ ಹಿರಿಯರ ಹಕ್ಕುಗಳನ್ನು ಗೌರವಿಸಲು ಮತ್ತು ಅವರ ಮಾರ್ಗದರ್ಶನವನ್ನು ಅನುಸರಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಈ ದಿನವನ್ನು ಸುಂದರಗೊಳಿಸಲು, ನಿಮ್ಮ ಪೋ?ಕರು, ಅಜ್ಜಿಯರು ಮತ್ತು ಮನೆಯಲ್ಲಿ ವಾಸಿಸುವ ಇತರ ಹಿರಿಯರೊಂದಿಗೆ ಸಮಯ ಕಳೆಯಿರಿ. ಅವರಿಗೆ ಇದಕ್ಕಿಂತ ಉತ್ತಮವಾದ ಉಡುಗೊರೆ ಇನ್ನೊಂದಿಲ್ಲ ಎಂದು ಹೇಳಿದರು.

ಆಶಾಕಿರಣ ಅಂಧ ಮಕ್ಕಳ ವಸತಿಯುತ ಪಾಠಶಾಲೆ ಅಧ್ಯಕರಾದ ಡಾ.ಜೆ.ಪಿ.ಕೃಷ್ಣೇಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಡೀ ಜಗತ್ತಿನಲ್ಲಿ 800 ಕೋಟಿ ಜನ 221 ದೇಶಗಳಲ್ಲಿ ಇಂದು ವಿಶೇಷವಾಗಿ ಹಿರಿಯರನ್ನು ಗೌರವಿಸುವ ದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಈ ದಿನವು ಸಮಾಜಕ್ಕೆ ಹಿರಿಯ ನಾಗರಿಕರ ಕೊಡುಗೆಯನ್ನು ಗುರುತಿಸಲು ಹಾಗೂ ಅವರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು, ಅವರಿಗೆ ಪರಿಹರಿಸುವ ಮಾರ್ಗಗಳನ್ನು ತಿಳಿಸಲು ಅವಕಾಶ ಕಲ್ಪಿಸುತ್ತದೆ. ಯುವಕರ ಜೀವನವು ವೇಗವಾಗಿ ಓಡುತ್ತಿದೆ. ಈ ಸಮಯದಲ್ಲಿ ಮನೆಯಲ್ಲಿರುವ ವೃದ್ಧರು ಒಂಟಿತನಕ್ಕೆ ಗುರಿಯಾಗುತ್ತಾರೆ. ಇಂದು ವಿಶ್ವ ಹಿರಿಯ ನಾಗರಿಕರ ದಿನದ ಸಂದರ್ಭದಲ್ಲಿ ನಿಮ್ಮ ಮನೆಯ ಹಿರಿಯರೊಂದಿಗೆ ಕೆಲವು ಸುಂದರ ಕ್ಷಣಗಳನ್ನು ಕಳೆಯುವಂತೆ ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ದಿನದ ಅಂಗವಾಗಿ ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದವರಿಗೆ ಬಹುಮಾನ ವಿತರಣೆ ಅಥವಾ ಸನ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.

ಯುವಜನತೆ ಹಿರಿಯರಿಗೆ ಭಾರತೀಯ ಸಂಪ್ರದಾಯದಂತೆ ಗೌರವ ನೀಡಬೇಕು. ಜೊತೆಗೆ ಅವರ ಅನುಭವಗಳನ್ನು ಪಡೆದುಕೊಂಡು ಮುಂದೆ ತಮ್ಮ ಜೀವನಕ್ಕೂ ಕೂಡ ಆಳವಡಿಸಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಅಭಿವೃದ್ದಿ ಇಲಾಖೆಯ ಡಿ.ಸಂತೋಷ್, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಗೋಪಾಲಕೃಷ್ಣ, ಜಿ.ಪಂ. ಉಪ ಕಾರ್ಯದರ್ಶಿ ಶಂಕರ ಕೊರವರ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ