ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ಕ್ರೀಡಾಕೂಟದಲ್ಲಿ ಚೆಸ್ ಪಂದ್ಯಾವಳಿಯಲ್ಲಿ ಪ್ರೇರಣ್ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರೇರಣ್ ಚಿಕ್ಕಮಗಳೂರು ಸೇಂಟ್ ಮೇರಿಸ್ ಪದವಿ ಪೂರ್ವ ಕಾಲೇಜನ್ನು ಪ್ರತಿನಿಧಿಸಿ ತಾನು ಆಡಿದ ಎಲ್ಲಾ ಪಂದ್ಯಗಳಲ್ಲಿ ವಿಜೇತನಾಗಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರೇರಣ್ ಮೂಡಿಗೆರೆ ತಾಲ್ಲೂಕು ಜನ್ನಾಪುರ ಮಣ್ಣಿಕೆರೆ ಗ್ರಾಮದ ಗಿರೀಶ್ ದಂಪತಿಗಳ ಪುತ್ರ. ಬಾಲ್ಯದಿಂದಲೂ ಚೆಸ್ ಬಗ್ಗೆ ಆಸಕ್ತಿ ಮೂಡಿಸಿಕೊಂಡು ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಗಳಿಸಿದ್ದಾರೆ.



