ಮೂಡಿಗೆರೆ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರಪಿತಾ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ ಮಾತನಾಡಿ ಮಹಾತ್ಮ ಗಾಂಧಿಯವರು ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. ಸತ್ಯ ಅಹಿಂಸೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಇಡೀ ದೇಶ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರಪಣೆ ನೀಡಿದರು. ಹಾಗೆಯೇ ದೇಶದ ಪ್ರಧಾನಿಯಾಗಿದ್ದ ಲಾಲ ಬಹುದ್ದೂರ್ ಶಾಸ್ತ್ರಿಯವರು ತಮ್ಮ ಸರಳತೆ, ಪ್ರಾಮಾಣಿಕತೆಯಿಂದ ದೇಶ ಸೇವೆ ಮಾಡಿದ್ದಾರೆ. ಇವರೆಲ್ಲರ ಜೀವನ ನಮಗೆ ಸ್ಪೂರ್ತಿದಾಯಕವಾಗಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ದೀಪಕ್ದೊಡ್ಡಯ್ಯ, ಪ್ರಶಾಂತ್ ಬಿಳಗುಳ, ಯೋಗೇಶ್ ಪೂಜಾರಿ, ಪರೀಕ್ಷಿತ್ ಜಾವಳಿ, ರವಿ ಒಡೆಯರ್, ಮೋಹನ್, ಸರೋಜಾ ಸುರೇಂದ್ರ, ಕಾಮಾಕ್ಷಿ, ಸಂದೀಪ್ ಕೆಲ್ಲೂರ್, ರಾಮಕೃಷ್ಣ, ರಂಗನಾಥ್, ಪದ್ಮಣ್ಣ ಮತ್ತಿತರರಿದ್ದರು.



