ದಿನಾಂಕ 28.10.2025ನೆಯ ಮಂಗಳವಾರದಂದು ಹಾಸನದ ಸರಕಾರಿ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಮಾಲಿನ್ಯ ನಿಯಂತ್ರಣಾ ಮಂಡಳಿಯ ವತಿಯಿಂದ ಜಂಟಿಯಾಗಿ ಕರ್ನಾಟಕ ರಾಜ್ಯದ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ಹಾಸನ ಸಂಸದರಾದ ಶ್ರೇಯಸ್ ಪಟೇಲ್, ಶೃಂಗೇರಿ ಶಾಸಕ ಟಿ ಡಿ ರಾಜೇಗೌಡ, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಹಳಸೆ ಶಿವಣ್ಣ, ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ ಆರ್ ಬಾಲಕೃಷ್ಣ ಬಾಳೂರು, ಹಾಸನ ಜಿಲ್ಲಾಧಿಕಾರಿ ಶ್ರೀಮತಿ ಲತಾ ಕುಮಾರಿ ಹಾಗೂ ಜಿಲ್ಲಾ ಪಂಚಾಯತಿ ಸಿ ಇ ಒ ಶ್ರೀಮತಿ ಬಿ ಆರ್ ಪೂರ್ಣಿಮಾ ಭಾಗವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಪರಿಸರ ಸ್ವಚ್ಚತೆಯಲ್ಲಿ ಸ್ವಯಂಪ್ರೇರಿತವಾಗಿ ತೊಡಿಸಿಕೊಂಡಿರುವ ಚಿಕ್ಕಮಗಳೂರಿನ ಸ್ವಚ್ಚ ಚಾರಿಟಬಲ್ ಟ್ರಸ್ಟ್ ಸೇರಿದಂತೆ ವಿವಿಧ ಸಂಘಸಂಸ್ಥೆಗಳನ್ನು ಗುರುತಿಸಿ ಗೌರವಿಸಲಾಯಿತು.




