ಲೋಕೋಪಯೋಗಿ ಇಲಾಖೆಯ ವತಿಯಿಂದ ರೂ. 2 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಗಂಗಮೂಲ–ಕೊಟ್ಟಿಗೆಹಾರ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗೆ ಮೂಡಿಗೆರೆ ತಾಲ್ಲೂಕಿನ ನಿಡುವಾಳೆ ಬಳಿ ಶಾಸಕಿ ನಯನ ಮೋಟಮ್ಮ ಅವರಿಂದ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ನಯನ ಮೋಟಮ್ಮ ಅವರು, “ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿ ನಮ್ಮ ಸರ್ಕಾರದ ಪ್ರಮುಖ ಆದ್ಯತೆ. ಉತ್ತಮ ರಸ್ತೆ ವ್ಯವಸ್ಥೆಯಿಂದ ಗ್ರಾಮಗಳ ಆರ್ಥಿಕ ಚಟುವಟಿಕೆಗೂ ವೇಗ ಸಿಗಲಿದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಾಳೂರು ಹೋಬಳಿಯ ಕಾಂಗ್ರೆಸ್ ಅಧ್ಯಕ್ಷ ಶ್ರೀನಾಥ್, ಜಯಪಾಲ್, ರವಿ ವಾಟೆಕಾನ್, ಮರ್ಕಲ್ ಉಪೇಂದ್ರ, ಚಂದ್ರು, ಸಚಿನ್ ಮರ್ಕಲ್, ಸಂಜೀವ, ವಿಜಯ್ ಹಾಗೂ ಮುಖಂಡರು,ಗ್ರಾಮಸ್ಥರು ಭಾಗವಹಿಸಿದ್ದರು.



