image_2025-11-14_125748724

 

 

ವೃಕ್ಷಮಾತೆ, ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮಕ್ಕ  ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ 114ನೇ ವಯಸ್ಸಿಯಲ್ಲಿ ನಿಧನ ಹೊಂದಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಮೃತಟಪಟ್ಟಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರಿಂದ ಸಂತಾಪ ವ್ಯಕ್ತವಾಗಿದೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು.

ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ಮರ, ಗಿಡಗಳನ್ನು ತಮ್ಮ ಮಕ್ಕಳಂತೆಯೇ ಪ್ರೀತಿಸುತ್ತಿದ್ದರು. ತಿಮ್ಮಕ್ಕ ಅವರಿಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ, 1997ರಲ್ಲಿ  ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ, 2019ರಲ್ಲಿ ಪದ್ಮಶ್ರೀ ಪ್ರಶಸ್ತಿ,  ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ