18Mudigere1A

 

 

ಸಂವಿಧಾನದಲ್ಲಿ ಮತದಾನವೇ ಶ್ರೇಷ್ಟವಾಗಿದ್ದು. ಮತದಾರ ಪಟ್ಟಿ ಪರಿಷ್ಕರಣೆಯಲ್ಲಿ ನೈಜ ಮತದಾರರು ಮತದಾನದಿಂದ ಹೊರಗುಳಿಯಬಾರದು ಎಂದು ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ಅವರು ಸೋಮವಾರ ಮೂಡಿಗೆರೆ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮತ ಪರಿಷ್ಕರಣೆ ಬಗ್ಗೆ ಬಿಎಲ್‍ಎ 2 ಕಾರ್ಯಕರ್ತರಿಗೆ ಏರ್ಪಡಿಸಿದ್ದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಭಾರತದ ಪ್ರಜಾಪ್ರಭುತ್ವದ ಶಕ್ತಿ ಅಡಗಿರುವುದು ಮತದಾನದಿಂದ. ದೇಶದ ಭವಿಷ್ಯವನ್ನು ರೂಪಿಸುವುದು ಚುನಾವಣೆಗಳು. ಇದರಲ್ಲಿ  18 ವರ್ಷ ಮೇಲ್ಪಟ್ಟವರ  ಮತವನ್ನು ಸೇರ್ಪಡೆಗೊಳಿಸುವುದು ಹಾಗೂ ವಲಸೆ ಮತದಾರರನ್ನು ಹೊರಗಿಡುವುದು ಸೇರಿದಂತೆ ನೈಜ ಮತದಾರರನ್ನು ಗುರುತಿಸಲು ಚುನಾವಣಾ ಆಯೋಗ ತೀವ್ರ ಮತ ಪರಿಷ್ಕರಣ ಪಟ್ಟಿ ತಯಾರಿಸಲು ಸಿದ್ಧತೆ ನಡೆಸುತ್ತಿದೆ. ಹಾಗಾಗಿ ಆಯಾ ಬೂತ್ ಮಟ್ಟದಲ್ಲಿ ಹೊಸ ಮತದಾರರನ್ನು ಸೇರ್ಪಡೆಗೊಳಿಸುವುದು, ನೈಜ ಮತದಾರರನ್ನು ಗುರುತಿಸುವುದು ಕಾರ್ಯಕರ್ತರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಪ್ರತಿ ಬೂತ್ ಮಟ್ಟದಲ್ಲೂ ಬಿಜೆಪಿ ಕಾರ್ಯಕರ್ತರು ಮತ ಪರಿಷ್ಕರ ಪಟ್ಟಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರಬೇಕು. ಸೇರ್ಪಡೆಗೊಳ್ಳುವವರನ್ನು ಖುದ್ದಾಗಿ ಪರಿಶೀಲಿಸಬೇಕು. ಎರೆಡೆರಡು ಕಡೆ ಮತ ಇರುವ ಮತದಾರರನ್ನು ಗುರುತಿಸಿ ರದ್ದುಪಡಿಸಲು ಸಹಕರಿಸಬೇಕು.  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ. ಸ್ವಜನ ಪಕ್ಷಪಾತ, ಹಿಂದೂ ವಿರೋಧಿ ನೀತಿ ಹಾಗೂ ಕಾಂಗ್ರೆಸ್ ಸರಕಾರದ ದುರಾಡಳಿತದ ಬಗ್ಗೆ ಹೋರಾಟ ನಡೆಸಲು ಸಿದ್ದರಾಗಬೇಕೆಂದು ಕರೆ ನೀಡಿದರು.

ಜಿಲ್ಲಾ ಕಾರ್ಯದರ್ಶಿ ಜೆ.ಎಸ್.ರಘು,  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ನರೇಂದ್ರ, ತಾಲೂಕು ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ. ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಎಲ್.ಕಲ್ಲೇಶ್. ದೀಪಕ್ ದೊಡ್ಡಯ್ಯ. ಪುಣ್ಯಪಾಲ್, ಪಂಚಾಕ್ಷರಿ, ಸುನಿಲ್ ಮಣ್ಣಿಕೆರೆ, ಧನಿಕ್ ಕೋಡದಿಣ್ಣೆ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ