IMG-20251123-WA0208

 

 

ಮೂಡಿಗೆರೆ ತಾಲ್ಲೂಕು  ಪಲ್ಗುಣಿ ಗ್ರಾಮದ ಜನರು ಕಳೆದ ಮೂರು ವರ್ಷಗಳಿಂದ ಅಶುದ್ಧ ನೀರು ಕುಡಿಯುವ ಅನಿವಾರ್ಯ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ಗ್ರಾಮದಲ್ಲಿ ಬಾವಿಯಿಂದ ಟ್ಯಾಂಕ್‌ಗಳಿಗೆ ನೀರು ಸಂಪರ್ಕ ಕಲ್ಪಿಸದೆ, ಹೇಮಾವತಿ ನದಿಯ ನೀರನ್ನು ನೇರವಾಗಿ ಸರಬರಾಜು ಮಾಡಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನದಿಯಲ್ಲಿ ಮಳೆಗಾಲದಲ್ಲಿ ಬರುವ ಕೊಳಕು, ಮಣ್ಣು, ಕಸ ಸೇರಿದಂತೆ ಆರೋಗ್ಯಕ್ಕೆ ಹಾನಿಕಾರಕ ಅಂಶಗಳು ಸೇರಿರುವ ಸಾಧ್ಯತೆ ಹೆಚ್ಚಿದೆ.
ಇದರ ನಡುವೆ, ನದಿಯ ತೀರದಲ್ಲಿ ಮೃತಪಟ್ಟಿದ್ದ ನಾಯಿ ವಾರಗಳಾದರೂ ಯಾವುದೂ ಇಲಾಖೆಯವರು ತೆಗೆದು ಹಾಕದಿರುವುದು ಗ್ರಾಮಸ್ಥರಲ್ಲಿ ಭೀತಿಯನ್ನೂ, ಅಸಮಾಧಾನವನ್ನೂ ಹೆಚ್ಚಿಸಿದೆ. “ಮಾನವ ಜೀವಕ್ಕೆ ಯಾರಿಗೂ ಬೆಲೆ ಇಲ್ಲವೇ?” ಎಂದು ಜನತೆ ಪ್ರಶ್ನೆ ಮಾಡಿದ್ದಾರೆ.
ತುರ್ತು ಪರಿಹಾರಕ್ಕಾಗಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ, ಸಾರ್ವಜನಿಕ ಆರೋಗ್ಯ ಹಾಗೂ ಪಾನೀಯ ಜಲ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಶುದ್ಧ ನೀರಿನ ವ್ಯವಸ್ಥೆ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ