ಕಳೆದ ತಿಂಗಳು ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಅವಿರತವಾಗಿ ದುಡಿದು ಗೆಲುವಿಗೆ ಸಹಕರಿಸಿದ ಎನ್ಡಿಎ ಮೈತ್ರಿಕೂಟದ ಎಲ್ಲಾ ಮುಖಂಡರುಗಳು, ಜನಪ್ರತಿನಿಧಿಗಳು, ಕಾರ್ಯಕರ್ತರಿಗೆ ಡಿ.23ರಂದು ಬೆಳಗ್ಗೆ 10 ಗಂಟೆಗೆ ರೈತಭವನದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ವಕ್ತಾರ ವಿನಯ್ ಹಳೆಕೋಟೆ ತಿಳಿಸಿದ್ದಾರೆ.
ಶನಿವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು, ಅಭಿನಂದನಾ ಕಾರ್ಯಕ್ರಮಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡ, ಧನಂಜಯಸರ್ಜಿ, ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ದೇವರಾಜ್ಶೆಟ್ಟಿ ಸೇರಿದಂತೆ ಇನ್ನಿತರ ನಾಯಕರುಗಳು. ಭಾಗವಹಿಸಲಿದ್ದಾರೆ. ಹಾಗಾಗಿ ಎನ್ಡಿಎ ಎಲ್ಲಾ ಮುಖಂಡರು ಕಾರ್ಯಕರ್ತರು ಆಗಮಿಸಬೇಕೆಂದು ಮನವಿ ಮಾಡಿದ್ದಾರೆ.



