ಮೂಡಿಗೆರೆ ಚೈತನ್ಯ ಪರಿಶಿಷ್ಟ ಜಾತಿ ಮಹಿಳಾ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಶ್ರೀಮತಿ ಸಾವಿತ್ರಿ ಎಂ.ಬಿ. ಅಧ್ಯಕ್ಷರಾಗಿ ಆಯ್ಕೆಯಾದರು.
ಒಟ್ಟು 16 ಜನ ನಿರ್ದೇಶಕ ಸಂಖ್ಯೆಯನ್ನು ಹೊಂದಿರುವ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಎಂ.ಬಿ. ಸಾವಿತ್ರಿ ಹಾಗೂ ಲಕ್ಷ್ಮಿ ರಾಮಯ್ಯ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಎಂ.ಬಿ. ಸಾವಿತ್ರಿ 09 ಮತಗಳನ್ನು ಪಡೆದು ವಿಜಯಶಾಲಿಯಾದರು.
ಶ್ರೀಮತಿ ರಾಧ ಮಂಜುನಾಥ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ಅಧಿಕಾರಿಯಾಗಿ ಶ್ರೀಮತಿ ಜ್ಯೋತಿ ಕಾರ್ಯನಿರ್ವಹಿಸಿದರು.



