ಚಿಕ್ಕಮಗಳೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ನೂತನ ಜಿಲ್ಲಾಧಿಕಾರಿಯಾಗಿ ಎನ್. ಎಂ.ನಾಗರಾಜ್ ಅವರನ್ನು ನೇಮಕ ಮಾಡಲಾಗಿದೆ.
ಕಳೆದ ಎರಡೂವರೆ ವರ್ಷಗಳಿಂದ ಸೇವೆ ಸಲ್ಲಿಸಿದ್ದ ಶ್ರೀಮತಿ ಮೀನಾ ನಾಗರಾಜ್ ಅವರನ್ನು ರೆವಿನ್ಯೂ ಕಮೀಷನರ್ ಆಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ.
ಈ ಹಿಂದೆ ರಾಜ್ಯ ಸಿಲ್ಕ್ ಬೋರ್ಡ್ ಎಂ.ಡಿ.ಯಾಗಿದ್ದ ಎನ್.ಎಂ. ನಾಗರಾಜ್ ಅವರನ್ನು ಚಿಕ್ಕಮಗಳೂರು ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ನಕ್ಸಲ್ ನಿಗ್ರಹ ಪಡೆ ಎಸ್ಪಿ ಆಗಿದ್ದ ಜಿತೇಂದ್ರ ಕುಮಾರ್ ದಯಾಮ ಅವರು ಚಿಕ್ಕಮಗಳೂರು ನೂತನ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ
ಚಿಕ್ಕಮಗಳೂರು ಜಿಲ್ಲಾ ಎಸ್ಪಿಯಾಗಿದ್ದ ಡಾ. ವಿಕ್ರಂ ಆಮ್ಟೆ ಅವರನ್ನು ಬೆಂಗಳೂರು ಡಿಸಿಪಿ (ಪೂರ್ವ) ಆಗಿ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ.



