ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ವಿಶ್ವಮಾನವ ದಿನವನ್ನು ಆಚರಿಸಲಾಯಿತು.
ಹಿರಿಯ ಪತ್ರಕರ್ತರು ಹಾಗೂ ಲೇಖಕರಾದ ಬಿ ತಿಪ್ಪೆರುದ್ರಪ್ಪ ಅವರು ಕುವೆಂಪು ಅವರ ಬದುಕು ಬರಹದ ಕುರಿತು ಉಪನ್ಯಾಸ ನೀಡಿದರು.
ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಂದ ಕುವೆಂಪು ಓದು ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್, ಹಿರಿಯ ಎಲೆಕ್ಟ್ರೀಷಿಯನ್ ಕಮ್ ಸೂಪರ್ ವೈಸರ್ ಶ್ರೀನಿವಾಸ್, ಏಕಲವ್ಯ ಮಾದರಿ ವಸತಿ ಶಾಲೆಯ ಕಲಾ ಶಿಕ್ಷಕರು ಮತ್ತು ಕಲಾವಿದರಾದ ನಯನ ಬಾಬುರಾವ್, ಕನ್ನಡ ಪ್ರಾಧ್ಯಾಪಕರಾದ ಉಮೇಶ್, ನವದೀಪ್, ಪ್ರಜ್ವಲ್, ನಂದೀಶ್ ಬಂಕೇನಹಳ್ಳಿ, ಸತೀಶ್ ತರುವೆ, ಸಂಗೀತಾ, ಸಂತೋಷ್, ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಯ ವಿಧ್ಯಾರ್ಥಿಗಳು ಇದ್ದರು.



