ವಶಪಡಿಸಿಕೊಂಡ ವಸ್ತುಗಳೊಂದಿಗೆ ಪೊಲೀಸ್ ತಂಡ
ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಾರ್ವಜನಿಕ ಮತ್ತು ಅರಣ್ಯ ಪ್ರದೇಶಗಳಲ್ಲಿ ಸರಣಿಯಾಗಿ ನಡೆಯುತ್ತಿದ್ದ ಶ್ರೀಗಂಧದ ಮರಗಳ ಕಳ್ಳತನ ಪ್ರಕರಣಗಳಲ್ಲಿ ಪೊಲೀಸ್ ತಂಡವು ಮೂರು ಜನ ಅಂತರ್ ಜಿಲ್ಲಾ ಆರೋಪಿಗಳನ್ನು ದಸ್ತಗಿರಿ ಮಾಡಿದೆ.
ಆರೋಪಿಗಳಿಂದ 5 ಲಕ್ಷ ಮೌಲ್ಯದ 93 ಕೆ.ಜಿ. ತೂಕದ ಶ್ರೀಗಂಧದ ತುಂಡುಗಳು ಮತ್ತು ಕೃತ್ಯಕ್ಕೆ ಬಳಸಿದ್ದ 2 ಲಕ್ಷ ಮೌಲ್ಯದ ಬೈಕ್ ವಶಪಡಿಸಿಕೊಂಡಿರುತ್ತಾರೆ.
ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡದಲ್ಲಿ ಸಿಪಿಐ ಬಸವನಹಳ್ಳಿ ವೃತ್ತ ವಿಜಯ್ ಕುಮಾರ್ ಬಿರಾದಾರ್, ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಗಳಾದ ಕೀರ್ತಿಕುಮಾರ್ ಮತ್ತು ಅಜರುದ್ದೀನ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ರವೀಂದ್ರ, ಲಿಂಗಮೂರ್ತಿ ಮತ್ತು ಮಧುಸೂಧನ್ ರವರು ಕಾರ್ಯನಿರ್ವಹಿಸಿರುತ್ತಾರೆ.



