ಮೂಡಿಗೆರೆ ವಿ ವಿಸ್ಡಮ್ ಶಾಲೆ ವಾರ್ಷಿಕೋತ್ಸವ ವಿಸ್ಡಮ್ ಫೆಸ್ಟ್ ಅನ್ನು ಪಟ್ಟಣದ ಜೇಸಿ ಭವನದಲ್ಲಿ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಕಾಂತಾರ ಟು ಸಿನಿಮಾದ ಚಿoಕ್ರಾ ಎಂಬ ಹೆಸರಿನಿಂದ ಖ್ಯಾತಿ ಹೊಂದಿರುವ ರಕ್ಷಿತ್ ರಾಮಚಂದ್ರ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ; ಮಕ್ಕಳಲ್ಲಿ ವಿಶೇಷ ಪ್ರತಿಭೆ ಇರುತ್ತದೆ ಅದನ್ನು ಗುರುತಿಸಿ ಪ್ರೋತ್ಸಾಹ ನೀಡಿದರೆ ಅವರು ಮುಂದೆ ದೊಡ್ಡ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ನಿರ್ಮಲ ಮಂಚೇಗೌಡ, ಪ.ಪಂ. ಮಾಜಿ ಉಪಾಧ್ಯಕ್ಷೆ ಶ್ರೀಮತಿ ಕಮಲಾಕ್ಷಿ, ಮೂಡಿಗೆರೆ ಜೇಸಿಐ ಅಧ್ಯಕ್ಷ ಸುನಿಲ್ ಶೆಟ್ಟಿ, ಯು.ಹೆಚ್. ಹೇಮಶೇಖರ್, ರವಿರಾಜ್, ಪ್ರಾಂಶುಪಾಲರಾದ ರೇಖಾ ರವಿರಾಜ್ ವೇದಿಕೆಯಲ್ಲಿದ್ದರು.
ಪುಟಾಣಿ ಮಕ್ಕಳಿಂದ ವೈವಿದ್ಯಮಯ ನೃತ್ಯ ಕಾರ್ಯಕ್ರಮವು ನೆರವೇರಿತು ಅದರ ಜೊತೆಗೆ ಕಿಂಡರ್ ಗಾರ್ಟನ್ ಗ್ರಾಜುಯೇಷನ್ ಡೇ ಕೂಡ ನೆರವೇರಿಸಿಕೊಡಲಾಯಿತು. ಶಾಲೆಯ ಶಿಕ್ಷಕರು ಮತ್ತು ಪೋಷಕರು ಭಾಗವಹಿಸಿದ್ದರು.




