ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಏ.10, 11 ಮತ್ತು 12 ರಂದು ನಡೆಯಲಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಏಪ್ರಿಲ್ 10ರ ಶುಕ್ರವಾರ ಕಡೂರು ಪಟ್ಟಣದಲ್ಲಿ ಸಮ್ಮೇಳನ ಅಧ್ಯಕ್ಷರ ಅದ್ದೂರಿ ಮೆರವಣಿಗೆಯೊಂದಿಗೆ ಪ್ರಾರಂಭಗೊಂಡು ಏ.11 ರ ಶನಿವಾರ ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರಿಂದ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ
ಏ.12 ರ ಭಾನುವಾರದಂದು ವಿವಿಧ ಗೋಷ್ಠಿಗಳೊಂದಿಗೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಮ್ಮೇಳನದಲ್ಲಿ ಸಾಹಿತ್ಯ ಪರಿಷತ್ತು ಕೊಡಮಾಡುವ ಸಾಹಿತ್ಯ ಸಿರಿ ಪ್ರಶಸ್ತಿಯನ್ನು ಈ ಬಾರಿ ಜಿಲ್ಲೆಯ ಸಾಹಿತಿಗಳಾದ ರಮೇಶ್ ಬೊಂಗಾಳೆ, ಸಿಂಗಟಗೆರೆ ಸಿದ್ದಪ್ಪ, ಬಿ.ಕೆ.ಪ್ರಿಯದರ್ಶಿನಿ ಹಾಗೂ ಮೇಕನಗದ್ದೆ ಲಕ್ಷ್ಮಣ ಗೌಡ ಇವರುಗಳಿಗೆ ನೀಡಲು ಕಾರ್ಯಕಾರಿ ಸಮಿತಿ ತೀರ್ಮಾನಿಸಿದೆ ಎಂದು ತಿಳಿಸಿದರು.



