ದಸರಾ ಸಂದರ್ಭದಲ್ಲಿ ನಾಡ ದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಮೆರೆಸುತ್ತಿದ್ದ ಹೆಮ್ಮೆಯ ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬುಧವಾರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಲೋಕರ್ಪಣೆಗೊಳಿಸಿದರು.
ಡಿಸೆಂಬರ್ 4, 2023 ರಂದು ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮದಗಜದೊಂದಿಗೆ ಕಾದಾಡಿ ವೀರ ಮರಣವನ್ನಪ್ಪಿದ್ದ ಅರ್ಜುನ ಆನೆಯ ಮೃತದೇಹವನ್ನು ಅದೇ ಸ್ಥಳದಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಗಿತ್ತು.
ಎರಡೂವರೆ. ವರ್ಷಗಳ ನಂತರ ಅರ್ಜುನ ಆನೆಯ ಸ್ಮಾರಕ ಲೋಕರ್ಪನೆಗೊಂಡಿದೆ. ಈ ವೇಳೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಸಂಸದ ಶ್ರೇಯಸ್ಪಟೇಲ್, ಶಾಸಕರುಗಳಾದ ಕೆ.ಎಂ.ಶಿವಲಿಂಗೇಗೌಡ, ಸಿಮೆಂಟ್ಮಂಜು, ಸಿಸಿಎಫ್ ಏಡುಕುಂಡಲ, ಡಿಸಿಎಫ್ ಸೌರಭ್ಕುಮಾರ್, ಡಿಸಿ ಕೆ.ಎಸ್.ಲತಾಕುಮಾರಿ, ಎಸ್ಪಿ ಶುಭನ್ವಿತಾ ಸೇರಿದಂತೆ ಇತರರು ಭಾಗವಹಿಸಿದ್ದರು.



