mkp

 

 

ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರ ವಿಧಾನ ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.
ಆದರೆ, ಪ್ರಾಣೇಶ್‌ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಗಾಯತ್ರಿ ಶಾಂತೇಗೌಡರಿಗೆ ನ್ಯಾಯಾಲಯದಲ್ಲಿ ಜಯ ದೊರಕಿದೆ.

ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ ಸ್ಥಾನಕ್ಕೆ 2021ರ ಡಿಸೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧು ಆಗಿದ್ದವು. ಪ್ರಾಣೇಶ್‌ ಅವರು 1,188 ಮತಗಳನ್ನು ಪಡೆದಿದ್ದರು. ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಗಳಿಸಿದ್ದರು. ಎಂ.ಕೆ.ಪ್ರಾಣೇಶ್‌ ಆರು ಮತಗಳ ಅಂತರದಿಂದ ಗೆದ್ದಿದ್ದರು.

ಆದರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ, ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಅವರಿಗೆ ಮತದಾನ ಮಾಡುವ ಅವಕಾಶ ಇಲ್ಲ ಎಂದು ಗಾಯತ್ರಿ ಶಾಂತೇಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಸತತ ನಾಲ್ಕುವರೆ ವರ್ಷಗಳ ಕಾನೂನು ಹೋರಾಟ ನಡೆಯುತ್ತಿತ್ತು. ಅಂತಿಮವಾಗಿ ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ಪ್ರಕಟವಾಗಿದ್ದು ಗಾಯತ್ರಿ ಶಾಂತೇಗೌಡ ಅವರು ಮುಂದಿನ ಒಂದುವರೆ ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ