ಮೂಡಿಗೆರೆ ತಾಲ್ಲೂಕು, ಬಣಕಲ್ ಹೋಬಳಿಯ ತ್ರಿಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಗುತ್ತಿಹಳ್ಳಿ, ಇದರ ನೂತನ ಅಧ್ಯಕ್ಷರಾಗಿ ಸಂಪತ್ ಪಟ್ಟದೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ಸಹಕಾರ ಸಂಘದ ಆವರಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಂಪತ್ ಅವರು ಒಬ್ಬರೇ ನಾಮಪತ್ರ ಸಲ್ಲಿಸದ್ದರಿಂದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ರುದ್ರಯ್ಯ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ.
ಒಪ್ಪಂದದಂತೆ ಈ ಹಿಂದಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಸಲಾಯಿತು.
ಸಂಪತ್ ಪಟ್ಟದೂರು ಅವರು ರಾಜಕೀಯವಾಗಿ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಸಹಕಾರಿ ರಂಗದಲ್ಲಿಯೂ ಗುರುತಿಸಿಕೊಂಡಿದ್ದಾರೆ.
ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಸಂಸ್ಥೆಗಳ ಮುಖಂಡರು, ಸಹಕಾರ ಸಂಘದ ನಿರ್ದೇಶಕರು, ಮಾಜಿ ಅಧ್ಯಕ್ಷರುಗಳು ಅಭಿನಂದಿಸಿದರು.


